ಹತ್ರಾಸ್, ಬಲ್ಲಿಯಾ ಆರೋಪಿಗಳನ್ನು ಸಮರ್ಥಿಸಿಕೊಂಡ ಕರ್ಣಿ ಸೇನಾ 
ದೇಶ

ಹತ್ರಾಸ್, ಬಲ್ಲಿಯಾ ಆರೋಪಿಗಳನ್ನು ಸಮರ್ಥಿಸಿಕೊಂಡ ಕರ್ಣಿ ಸೇನಾ 

ಕರ್ಣಿ ಸೇನಾ ಸಂಘಟನೆ ಹತ್ರಾಸ್, ಬಲ್ಲಿಯಾ ಆರೋಪಿಗಳ ಬೆಂಬಲಕ್ಕೆ ಧಾವಿಸಿದೆ. 

ಲಖನೌ: ಕರ್ಣಿ ಸೇನಾ ಸಂಘಟನೆ ಹತ್ರಾಸ್, ಬಲ್ಲಿಯಾ ಆರೋಪಿಗಳ ಬೆಂಬಲಕ್ಕೆ ಧಾವಿಸಿದೆ. 

ಎರಡೂ ಪ್ರಕರಣಗಳಲ್ಲಿ ಆರೋಪಿಗಳು ಠಾಕೂರ್ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ಣಿ ಸೇನಾ ಆರೋಪಿಗಳ ಪರ ನಿಂತಿದೆ. ಅ.15 ರಂದು ಬಲ್ಲಿಯಾ ಪಂಚಾಯ್ತಿ ಸಭೆಯಲ್ಲಿ ಗುಂಡಿನ ದಾಳಿ ನಡೆಸಿದ ಆರೋಪಿಯನ್ನು ಭೇಟಿ ಮಾಡಲು ಹೋಗುತ್ತಿದ್ದ ನಿಯೋಗವನ್ನು ಪೊಲೀಸರು ತಡೆದಿದ್ದಾರೆ. 

ಕರ್ಣಿ ಸೇನಾದ ಹಿರಿಯ ಉಪಾಧ್ಯಕ್ಷ ದ್ರುವ್ ಕುಮಾರ್ ಸಿಂಗ್ ಈ ಬಗ್ಗೆ ಮಾತನಾಡಿದ್ದು, ರೇಷನ್ ಅಂಗಡಿಗಳ ವಿತರಣೆಯ ಸಂದರ್ಭದಲ್ಲಿ ಮತ್ತೊಂದು ಗುಂಪು ಆರೋಪಿ ಧಿರೇಂದ್ರ ಅವರ 84 ವರ್ಷದ ತಂದೆಯೊಂದಿಗೆ ಸಂಘರ್ಷಕ್ಕೆ ಇಳಿದಿದ್ದಾರೆ. ಈ ಕಾರಣದಿಂದಾಗಿ ಧಿರೇಂದ್ರ ಶೂಟೌಟ್ ಮಾಡಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ. 

ಈ ಹಿಂದೆ ಬೈರಿಯಾದ ಬಿಜೆಪಿ ಶಾಸಕ ಸಹ ಧಿರೇಂದ್ರ ಪ್ರತಾಪ್ ನ್ನು ಸಮರ್ಥಿಸಿಕೊಂಡಿದ್ದರು. ಇದೇ ವೇಳೆ ಹತ್ರಾಸ್ ಆರೋಪಿಗಳನ್ನು ಸಮರ್ಥಿಸಿಕೊಂಡಿದ್ದು, ಆರೋಪಿ ಹಾಗೂ ಸಂತ್ರಸ್ತೆಯ ನಡುವೆ 104 ಕರೆಗಳು ಆಗಿವೆ ಈಗ ಪ್ರಕರಣಕ್ಕೆ ಹೊಸ ಬಣ್ಣ ಬಂದಿದೆ. ಘಟನೆ ನಡೆದ ಸಮಯದಲ್ಲಿ ಆರೋಪಿಗಳ ಮೊಬೈಲ್ ಲೊಕೇಷನ್ ಎಲ್ಲಿತ್ತು ಎಂಬುದನ್ನು ಸಿಬಿಐ ಬಹಿರಂಗಪಡಿಸಬೇಕೆಂದು ಕರ್ಣಿ ಸೇನಾ ಆಗ್ರಹಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT