ದೇಶ

ಹೈದರಾಬಾದ್ ಪ್ರವಾಹ ಸಂತ್ರಸ್ತರಿಗೆ ಮಾಧ್ಯಮ ಕ್ಷೇತ್ರದ ದಿಗ್ಗಜ ರಾಮೋಜಿ ರಾವ್ ರಿಂದ 5 ಕೋಟಿ ರೂ. ನೆರವು

Lingaraj Badiger

ಹೈದರಾಬಾದ್: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ಹೈದರಾಬಾದ್ ನ ಸಂತ್ರಸ್ತರಿಗೆ ಮಾಧ್ಯಮ ಕ್ಷೇತ್ರದ ದಿಗ್ಗಜ ಮತ್ತು ರಾಮೋಜಿ ಸಮೂಹದ ಅಧ್ಯಕ್ಷ ರಾಮೋಜಿ ರಾವ್ ಅವರು 5 ಕೋಟಿ ರೂಪಾಯಿ ನೆರವು ನೀಡಿದ್ದಾರೆ.

5 ಕೋಟಿ ರೂಪಾಯಿ ಚೆಕ್ ಅನ್ನು ಪೌರಾಡಳಿತ ಮತ್ತು ನಗರಾಭಿವೃದ್ಧಿ ಸಚಿವ ಕೆ ಟಿ ರಾಮರಾವ್ ಅವರಿಗೆ ರಾಮೋಜಿ ಸಮೂಹದ ಪ್ರತಿನಿಧಿ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನೂರು ವರ್ಷಗಳಲ್ಲೇ ಮೊದಲ ಬಾರಿಗೆ ಹೈದರಾಬಾದ್ ನಗರ ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವುದಕ್ಕೆ ನೊಂದಿರುವ ರಾಮೋಜಿರಾವ್ ಈ ನೆರವನ್ನು ನೀಡಿದ್ದಾರೆ.

ತೆಲಂಗಾಣದಲ್ಲಿ ವಾಯಭಾರ ಕುಸಿತದಿಂದ ಭಾರೀ ಮಳೆಯಿಂದಾಗಿ ರಾಜಧಾನಿ ಹೈದರಾಬಾದ್ ಸೇರಿದಂತೆ ಅನೇಕ ಪಟ್ಟಣಗಳು ಮತ್ತು ಪ್ರದೇಶಗಳು ಪ್ರವಾಹಕ್ಕೆ ತುತ್ತಾಗಿವೆ. ಅಕಾಲಿಕ ಮಳೆಯಿಂದ ಸಾಮಾನ್ಯ ಜನಜೀವನಕ್ಕೆ ತೊಂದರೆಯಾಗಿದ್ದು, ಜನರು ತುಂಬಾ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಅನೇಕ ಸಂಘ-ಸಂಸ್ಥೆಗಳಲ್ಲದೆ, ಇತರ ರಾಜ್ಯಗಳ ಸರ್ಕಾರಗಳೂ ಸಹಾಯ ಹಸ್ತ ನೀಡಿವೆ. 

SCROLL FOR NEXT