ಹೈದರಾಬಾದ್ ಮಳೆ 
ದೇಶ

ಹೈದರಾಬಾದ್ ಪ್ರವಾಹ ಸಂತ್ರಸ್ತರಿಗೆ ಮಾಧ್ಯಮ ಕ್ಷೇತ್ರದ ದಿಗ್ಗಜ ರಾಮೋಜಿ ರಾವ್ ರಿಂದ 5 ಕೋಟಿ ರೂ. ನೆರವು

ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ಹೈದರಾಬಾದ್ ನ ಸಂತ್ರಸ್ತರಿಗೆ ಮಾಧ್ಯಮ ಕ್ಷೇತ್ರದ ದಿಗ್ಗಜ ಮತ್ತು ರಾಮೋಜಿ ಸಮೂಹದ ಅಧ್ಯಕ್ಷ ರಾಮೋಜಿ ರಾವ್ ಅವರು 5 ಕೋಟಿ ರೂಪಾಯಿ ನೆರವು ನೀಡಿದ್ದಾರೆ.

ಹೈದರಾಬಾದ್: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ಹೈದರಾಬಾದ್ ನ ಸಂತ್ರಸ್ತರಿಗೆ ಮಾಧ್ಯಮ ಕ್ಷೇತ್ರದ ದಿಗ್ಗಜ ಮತ್ತು ರಾಮೋಜಿ ಸಮೂಹದ ಅಧ್ಯಕ್ಷ ರಾಮೋಜಿ ರಾವ್ ಅವರು 5 ಕೋಟಿ ರೂಪಾಯಿ ನೆರವು ನೀಡಿದ್ದಾರೆ.

5 ಕೋಟಿ ರೂಪಾಯಿ ಚೆಕ್ ಅನ್ನು ಪೌರಾಡಳಿತ ಮತ್ತು ನಗರಾಭಿವೃದ್ಧಿ ಸಚಿವ ಕೆ ಟಿ ರಾಮರಾವ್ ಅವರಿಗೆ ರಾಮೋಜಿ ಸಮೂಹದ ಪ್ರತಿನಿಧಿ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನೂರು ವರ್ಷಗಳಲ್ಲೇ ಮೊದಲ ಬಾರಿಗೆ ಹೈದರಾಬಾದ್ ನಗರ ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವುದಕ್ಕೆ ನೊಂದಿರುವ ರಾಮೋಜಿರಾವ್ ಈ ನೆರವನ್ನು ನೀಡಿದ್ದಾರೆ.

ತೆಲಂಗಾಣದಲ್ಲಿ ವಾಯಭಾರ ಕುಸಿತದಿಂದ ಭಾರೀ ಮಳೆಯಿಂದಾಗಿ ರಾಜಧಾನಿ ಹೈದರಾಬಾದ್ ಸೇರಿದಂತೆ ಅನೇಕ ಪಟ್ಟಣಗಳು ಮತ್ತು ಪ್ರದೇಶಗಳು ಪ್ರವಾಹಕ್ಕೆ ತುತ್ತಾಗಿವೆ. ಅಕಾಲಿಕ ಮಳೆಯಿಂದ ಸಾಮಾನ್ಯ ಜನಜೀವನಕ್ಕೆ ತೊಂದರೆಯಾಗಿದ್ದು, ಜನರು ತುಂಬಾ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಅನೇಕ ಸಂಘ-ಸಂಸ್ಥೆಗಳಲ್ಲದೆ, ಇತರ ರಾಜ್ಯಗಳ ಸರ್ಕಾರಗಳೂ ಸಹಾಯ ಹಸ್ತ ನೀಡಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT