ಚಿರಾಗ್ ಪಾಸ್ವಾನ್ 
ದೇಶ

ನನ್ನ ಹೋರಾಟ ನಿತೀಶ್ ವಿರುದ್ಧ ಮಾತ್ರ, ಕೊನೆಯ ಉಸಿರಿರುವವರೆಗೂ ಮೋದಿ ಅವರೊಂದಿಗೆ ಇರುತ್ತೇನೆ: ಚಿರಾಗ್ ಪಾಸ್ವಾನ್

ನನ್ನ ಹೋರಾಟ ಏನಿದ್ದರೂ ನಿತೀಶ್ ಕುಮಾರ್ ವಿರುದ್ಧ ಮಾತ್ರ, ಆದರೆ ನನ್ನ ಕೊನೆಯ ಉಸಿರಿರುವವರೆಗೂ ಪ್ರಧಾನಿ ಮೋದಿ ಜೊತೆಗಿರುತ್ತೇನೆ ಎಂದು ಎಲ್‌ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಪಾಟ್ನಾ: ನನ್ನ ಹೋರಾಟ ಏನಿದ್ದರೂ ನಿತೀಶ್ ಕುಮಾರ್ ವಿರುದ್ಧ ಮಾತ್ರ, ಆದರೆ ನನ್ನ ಕೊನೆಯ ಉಸಿರಿರುವವರೆಗೂ ಪ್ರಧಾನಿ ಮೋದಿ ಜೊತೆಗಿರುತ್ತೇನೆ ಎಂದು ಎಲ್‌ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎನ್‌ಡಿಎ ಪರ ಪ್ರಚಾರ ನಡೆಸಿದ ಪ್ರಧಾನಿ ಮೋದಿ, ತಮ್ಮ ಭಾಷಣದಲ್ಲಿ ಇತ್ತಿಚಿಗೆ ನಿಧನರಾದ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಸ್ಮರಿಸಿದರು. ರಾಮ್ ವಿಲಾಸ್ ಪಾಸ್ವಾನ್ ತಮ್ಮ ಜೀವನದ ಕೊನೆಯ ಉಸಿರಿರುವವರೆಗೂ ನನ್ನ ಜೊತೆ ಇದ್ದರು ಎಂದು ಪ್ರಧಾನಿ  ಮೋದಿ ತಮ್ಮ ಭಾಷಣದಲ್ಲಿ ಹೇಳಿದರು. 

ಇದೇ ವಿಚಾರಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳಿರುವ ಚಿರಾಗ್, 'ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ತಮ್ಮ ತಂದೆಯನ್ನು ಸ್ಮರಿಸಿರುವುದಕ್ಕೆ ಧನ್ಯವಾದ ಅರ್ಪಿಸಿರುವ ಪುತ್ರ ಚಿರಾಗ್ ಪಾಸ್ವಾನ್, ನಾನೂ ಕೂಡ ಪ್ರಧಾನಿ ಅವರೊಂದಿಗೆ ನನ್ನ ಜೀವನದ ಕೊನೆಯ ಕ್ಷಣದವರೆಗೂ ಇರುತ್ತೇನೆ ಎಂದು  ಭರವಸೆ ನೀಡಿದರು.

ಪ್ರಧಾನಿ ನಮ್ಮ ತಂದೆಯನ್ನು ನೆನೆದಿರುವುದು ನನಗೆ ಗೌರವದ ವಿಷಯ. ನಾನು ತುಂಬ ಭಾವುಕನಾಗಿದ್ದೇನೆ. ಅಲ್ಲದೇ ಮೋದಿ ಅವರೊಂದಿಗೆ ಗಟ್ಟಿಯಾಗಿ ನಿಲ್ಲುವ ಭರವಸೆಯನ್ನೂ ನೀಡುತ್ತೇನೆ. ನನ್ನ ಹೋರಾಟ ಏನಿದ್ದರೂ ನಿತೀಶ್ ಕುಮಾರ್ ವಿರುದ್ಧವೇ ಹೊರತು ಬಿಜೆಪಿ ವಿರುದ್ಧವಲ್ಲ. ಆದರೆ ಜೆಡಿಯು ಮಿತ್ರ  ಪಕ್ಷವಾಗಿರುವುದರಿಂದ ನನ್ನ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ. ಆದರೆ ನಾನು ಮಾತ್ರ ಬಿಜೆಪಿ ವಿರುದ್ಧ ಮಾತನಾಡುವುದಿಲ್ಲ ಎಂದು ಚಿರಾಗ್ ಪಾಸ್ವಾನ್ ಸ್ಪಷ್ಟಪಡಿಸಿದರು. 

ಅಂತೆಯೇ, ನಾನು ಸಿಎಂ ಆದರೆ ನಿತೀಶ್ ಕುಮಾರ್ ರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಒಂದು ವೇಳೆ ನಾನು ಅಧಿಕಾರಕ್ಕೆ ಬಂದರೆ ಸಾತ್ ನಿಶ್ಚೇ (ಏಳು ಪರಿಹಾರಗಳು) ಯೋಜನೆಯಲ್ಲಿ ನಾನು ಹಗರಣಗಳನ್ನು ತನಿಖೆ ಮಾಡುತ್ತೇನೆ ಮತ್ತು ತಪ್ಪಿತಸ್ಥರೆಲ್ಲರನ್ನು ಜೈಲಿಗೆ ಕಳುಹಿಸಲಾಗುತ್ತದೆ.  ಆ ಪಟ್ಟಿಯಲ್ಲಿ ನಿತೀಶ್ ಕುಮಾರ್ ಇದ್ದರೆ ಅವರನ್ನೂ ಸಹ ಎಂದು ಚಿರಾಗ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT