ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ದೇಶಾದ್ಯಂತ ಕೋವಿಡ್-19 ಲಸಿಕೆ ಉಚಿತವಾಗಿ ಲಭ್ಯವಾಗಬೇಕು: ಮುಖ್ಯಮಂತ್ರಿ ಕೇಜ್ರಿವಾಲ್ 

ಎಲ್ಲ ಜನರು ಕೊರೋನಾವೈರಸ್ ನಿಂದ ತೊಂದರೆ ಎದುರಿಸುತ್ತಿದ್ದು, ದೇಶಾದ್ಯಂತ ಕೋವಿಡ್-19 ಲಸಿಕೆ ಉಚಿತವಾಗಿ ಲಭ್ಯವಿರುವಂತೆ ವ್ಯವಸ್ಥೆ ಮಾಡಬೇಕೆಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

ನವದೆಹಲಿ: ಎಲ್ಲ ಜನರು ಕೊರೋನಾವೈರಸ್ ನಿಂದ ತೊಂದರೆ ಎದುರಿಸುತ್ತಿದ್ದು, ದೇಶಾದ್ಯಂತ ಕೋವಿಡ್-19 ಲಸಿಕೆ ಉಚಿತವಾಗಿ ಲಭ್ಯವಿರುವಂತೆ ವ್ಯವಸ್ಥೆ ಮಾಡಬೇಕೆಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

ಕೋವಿಡ್-19 ಲಸಿಕೆ ಇನ್ನೂ ಸಿದ್ಧವಾಗದಿದ್ದರೂ ಉಚಿತವಾಗಿ ಕೊರೋನಾ ಲಸಿಕೆ ವಿತರಿಸಲಾಗುವುದು ಎಂದು ಬಿಜೆಪಿ ಬಿಹಾರ ವಿಧಾನಸಭಾ ಪ್ರಣಾಳಿಕೆಯಲ್ಲಿ ಸೇರಿಸಿದ ಬಳಿಕ ಎಲ್ಲ ಜನರಿಗೂ ಉಚಿತವಾಗಿ ವಿತರಿಸಬೇಕೆಂಬ ಚರ್ಚೆಯೂ ಆರಂಭವಾಗಿದೆ.

ಈಶಾನ್ಯ ದೆಹಲಿಯಲ್ಲಿ ಎರಡು ಮೇಲು ಸೇತುವೆ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ಇಡೀ ದೇಶ ಕೋವಿಡ್-19 ಲಸಿಕೆಯನ್ನು ಉಚಿತವಾಗಿ ಪಡೆಯಬೇಕು, ಇದು ಇಡೀ ದೇಶದ ಹಕ್ಕಾಗಿದೆ. ಎಲ್ಲ ಜನರು ಕೊರೋನಾ ಸೋಂಕಿನಿಂದ ತೊಂದರೆಗೊಳಗಾಗಿದ್ದು, ದೇಶದಲ್ಲಿ ಉಚಿತವಾಗಿ ಲಸಿಕೆಯನ್ನು ನೀಡಬೇಕು ಎಂದರು.

ಒಂದು ಬಾರಿ ಕೊರೋನಾವೈರಸ್ ಲಸಿಕೆ ದೊರತ ಬಳಿಕ, ವಿಶೇಷ ಕೋವಿಡ್-19  ರೋಗ ನಿರೋಧಕ ಕಾರ್ಯಕ್ರಮದಡಿ ಕೇಂದ್ರವು ನೇರವಾಗಿ ಔಷಧವನ್ನು ಸಂಗ್ರಹಿಸಿ ಆದ್ಯತೆಯ ಗುಂಪುಗಳಿಗೆ ಲಭ್ಯವಾಗುವಂತೆ ವಿತರಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಟಿ.ನರಸೀಪುರ ಪೊಲೀಸ್ ಠಾಣೆ ಮುಂದೆ ಭಾರೀ ಹೈಡ್ರಾಮಾ: ಆರ್ ಅಶೋಕ್, ಯದುವೀರ್, ಪ್ರತಾಪ್ ಸಿಂಹ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆ ಆದರೂ ನಾನು ಬರ್ತೀನಿ: ಹಿಂದೂಗಳ ತಂಟೆಗೆ ಹೋದರೆ ಹುಷಾರ್: ಸರ್ಕಾರಕ್ಕೆ ಅಶೋಕ್ ವಾರ್ನಿಂಗ್

'ತಾಕತ್ತಿದ್ದರೆ ಟ್ರೈ ಮಾಡು ಮಗ, ಆಲ್ ದಿ ಬೆಸ್ಟ್ ರಣಹೇಡಿ': ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದ ಪ್ರತಾಪ್ ಸಿಂಹಗೆ ಪ್ರದೀಪ್ ಈಶ್ವರ್ ಚಾಲೆಂಜ್!

WTC 2025-27: ಕೇವಲ 9 ಪಂದ್ಯಗಳಲ್ಲೇ ICC ಟೆಸ್ಟ್ ಚಾಂಪಿಯನ್ ಷಿಪ್ ನಿಂದ ಪಾಕಿಸ್ತಾನ ಕಿಕೌಟ್!

ಪ್ರಿಯಾಂಕ್ ಖರ್ಗೆ ಪರಪ್ಪನ ಅಗ್ರಹಾರ ಜೈಲು ಸೇರುವ ಕಾಲ ಹತ್ತಿರ ಬಂದಿದೆ: ಪ್ರತಾಪ್ ಸಿಂಹ ತಿರುಗೇಟು