ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ದೇಶಾದ್ಯಂತ ಕೋವಿಡ್-19 ಲಸಿಕೆ ಉಚಿತವಾಗಿ ಲಭ್ಯವಾಗಬೇಕು: ಮುಖ್ಯಮಂತ್ರಿ ಕೇಜ್ರಿವಾಲ್ 

ಎಲ್ಲ ಜನರು ಕೊರೋನಾವೈರಸ್ ನಿಂದ ತೊಂದರೆ ಎದುರಿಸುತ್ತಿದ್ದು, ದೇಶಾದ್ಯಂತ ಕೋವಿಡ್-19 ಲಸಿಕೆ ಉಚಿತವಾಗಿ ಲಭ್ಯವಿರುವಂತೆ ವ್ಯವಸ್ಥೆ ಮಾಡಬೇಕೆಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

ನವದೆಹಲಿ: ಎಲ್ಲ ಜನರು ಕೊರೋನಾವೈರಸ್ ನಿಂದ ತೊಂದರೆ ಎದುರಿಸುತ್ತಿದ್ದು, ದೇಶಾದ್ಯಂತ ಕೋವಿಡ್-19 ಲಸಿಕೆ ಉಚಿತವಾಗಿ ಲಭ್ಯವಿರುವಂತೆ ವ್ಯವಸ್ಥೆ ಮಾಡಬೇಕೆಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

ಕೋವಿಡ್-19 ಲಸಿಕೆ ಇನ್ನೂ ಸಿದ್ಧವಾಗದಿದ್ದರೂ ಉಚಿತವಾಗಿ ಕೊರೋನಾ ಲಸಿಕೆ ವಿತರಿಸಲಾಗುವುದು ಎಂದು ಬಿಜೆಪಿ ಬಿಹಾರ ವಿಧಾನಸಭಾ ಪ್ರಣಾಳಿಕೆಯಲ್ಲಿ ಸೇರಿಸಿದ ಬಳಿಕ ಎಲ್ಲ ಜನರಿಗೂ ಉಚಿತವಾಗಿ ವಿತರಿಸಬೇಕೆಂಬ ಚರ್ಚೆಯೂ ಆರಂಭವಾಗಿದೆ.

ಈಶಾನ್ಯ ದೆಹಲಿಯಲ್ಲಿ ಎರಡು ಮೇಲು ಸೇತುವೆ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ಇಡೀ ದೇಶ ಕೋವಿಡ್-19 ಲಸಿಕೆಯನ್ನು ಉಚಿತವಾಗಿ ಪಡೆಯಬೇಕು, ಇದು ಇಡೀ ದೇಶದ ಹಕ್ಕಾಗಿದೆ. ಎಲ್ಲ ಜನರು ಕೊರೋನಾ ಸೋಂಕಿನಿಂದ ತೊಂದರೆಗೊಳಗಾಗಿದ್ದು, ದೇಶದಲ್ಲಿ ಉಚಿತವಾಗಿ ಲಸಿಕೆಯನ್ನು ನೀಡಬೇಕು ಎಂದರು.

ಒಂದು ಬಾರಿ ಕೊರೋನಾವೈರಸ್ ಲಸಿಕೆ ದೊರತ ಬಳಿಕ, ವಿಶೇಷ ಕೋವಿಡ್-19  ರೋಗ ನಿರೋಧಕ ಕಾರ್ಯಕ್ರಮದಡಿ ಕೇಂದ್ರವು ನೇರವಾಗಿ ಔಷಧವನ್ನು ಸಂಗ್ರಹಿಸಿ ಆದ್ಯತೆಯ ಗುಂಪುಗಳಿಗೆ ಲಭ್ಯವಾಗುವಂತೆ ವಿತರಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT