ಪ್ರಧಾನಿ ಮೋದಿ 
ದೇಶ

ಗುಜರಾತ್‌ನ ಮೂರು ಪ್ರಮುಖ ಯೋಜನೆಗಳ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ

ತವರು ರಾಜ್ಯ ಗುಜರಾತ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಪ್ರಮುಖ ಯೋಜನೆಗಳನ್ನು ಉದ್ಘಾಟನೆ ಮಾಡಿದರು.

ಅಹ್ಮದಾಬಾದ್: ತವರು ರಾಜ್ಯ ಗುಜರಾತ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಪ್ರಮುಖ ಯೋಜನೆಗಳನ್ನು ಉದ್ಘಾಟನೆ ಮಾಡಿದರು.

ಗುಜರಾತ್‌ನ ರೈತರಿಗಾಗಿ ‘ಕಿಸಾನ್ ಸೂರ್ಯೋದಯ ಯೋಜನೆ’, ಯು ಎನ್ ಮೆಹ್ತಾ ಹೃದ್ರೋಗ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಮಕ್ಕಳ ಹೃದಯ ಚಿಕಿತ್ಸಾ ಆಸ್ಪತ್ರೆ ಸೇರಿದಂತೆ ಮೂರು ಪ್ರಮುಖ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟನೆ  ಮಾಡಿದರು.

ನೀರಾವರಿಗಾಗಿ ಹಗಲು ವೇಳೆ ವಿದ್ಯುತ್ ಸರಬರಾಜು ಮಾಡಲು ಮುಖ್ಯಮಂತ್ರಿ ವಿಜಯ್ ರೂಪಾನಿ ನೇತೃತ್ವದ ಗುಜರಾತ್ ಸರ್ಕಾರ ಇತ್ತೀಚೆಗೆ ‘ಕಿಸಾನ್ ಸೂರ್ಯೋದಯ ಯೋಜನೆ’ ಘೋಷಿಸಿತ್ತು. ಈ ಯೋಜನೆಯಡಿ ರೈತರ ಜಮೀನುಗಳಿಗೆ ಬೆಳಿಗ್ಗೆ 5 ರಿಂದ ರಾತ್ರಿ 9 ರವರೆಗೆ ವಿದ್ಯುತ್ ಸರಬರಾಜು   ಮಾಡಲಾಗುತ್ತದೆ. ಯೋಜನೆಯ ಪ್ರಸರಣ ಮೂಲಸೌಕರ್ಯಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ 3,523 ಕೋಟಿ ರೂ.ನಿಗದಿಪಡಿಸಿದೆ. ಈ ಮಹತ್ತರ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.

ಅಂತೆಯೇ ಯು ಎನ್ ಮೆಹ್ತಾ ಹೃದ್ರೋಗ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಮಕ್ಕಳ ಹೃದಯ ಚಿಕಿತ್ಸಾ ಆಸ್ಪತ್ರೆ ಹಾಗೂ ಅಹಮದಾಬಾದ್‍ ಸರ್ಕಾರಿ ಆಸ್ಪತ್ರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಟೆಲಿ-ಹೃದ್ರೋಗ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಯು ಎನ್ ಮೆಹ್ತಾ ಸಂಸ್ಥೆ ಇದೀಗ  ಹೃದಯಶಾಸ್ತ್ರದ ಭಾರತದ ಅತಿದೊಡ್ಡ ಆಸ್ಪತ್ರೆಯಾಗಲಿದೆ. ಜೊತೆಗೆ ವಿಶ್ವದರ್ಜೆಯ ವೈದ್ಯಕೀಯ ಮೂಲಸೌಕರ್ಯ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಹೊಂದಿರುವ ವಿಶ್ವದ ಆಯ್ದ ಕೆಲವೇ ಆಸ್ಪತ್ರೆಗಳಲ್ಲಿ ಒಂದಾಗಲಿದೆ. 

ಬಳಿಕ ಪ್ರಧಾನಿ ಮೋದಿ ಗುಜರಾತ್ ನ ಗಿರ್ನಾರ್‌ನಲ್ಲಿನ ರೋಪ್‌ವೇಯನ್ನು ಉದ್ಘಾಟಿಸಿದರು. ಗಿರ್ನಾರ್‌ನಲ್ಲಿ ಪ್ರಧಾನ ಮಂತ್ರಿ ರೋಪ್‌ವೇ ಉದ್ಘಾಟಿಸುವುದರೊಂದಿಗೆ ಕಾರಣ ಗುಜರಾತ್ ಮತ್ತೊಮ್ಮೆ ಜಾಗತಿಕ ಪ್ರವಾಸೋದ್ಯಮ ನಕ್ಷೆಯಲ್ಲಿ ಎದ್ದು ಕಾಣುವಂತಾಗಿದೆ. ಈ ರೋಪ್ ವೇ ನಲ್ಲಿ ಆರಂಭದಲ್ಲಿ 25-30  ಕ್ಯಾಬಿನ್‌ಗಳು ಇರಲಿದ್ದು, ಪ್ರತಿ ಕ್ಯಾಬಿನ್‌ ನಲ್ಲಿ 8 ಜನರು ಸಾಗುವ ಸಾಮರ್ಥ್ಯವಿದೆ. ರೋಪ್‍ ವೇ ಉದ್ದ 2.3 ಕಿ.ಮೀ ಆಗಿದೆ. ಒಂದು ಗಂಟೆಗೆ ಈ ರೋಪ್ ವೇ ಮೂಲಕ ಒಂದು ಸಾವಿರ ಮಂದಿಯನ್ನು ಸಾಗಿಸಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT