ಇಂಟೆಸರ್ ಅಲಿ 
ದೇಶ

ಕೆಲಸಕ್ಕೆ ಗಡ್ಡವೇ ಅಡ್ಡವಾಯ್ತು: ಉತ್ತರಪ್ರದೇಶದಲ್ಲಿ ಎಸ್ಐ ಅಮಾನತು!

ಉತ್ತರಪ್ರದೇಶದಲ್ಲಿ ಸಬ್ ಇನ್ ಸ್ಪೆಕ್ಟರ್ ಗಡ್ಡ ಬೆಳೆಸಿದ್ದಾರೆ ಎಂದು ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. 

ಮೀರತ್: ಉತ್ತರಪ್ರದೇಶದಲ್ಲಿ ಸಬ್ ಇನ್ ಸ್ಪೆಕ್ಟರ್ ಗಡ್ಡ ಬೆಳೆಸಿದ್ದಾರೆ ಎಂದು ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. 

ಗಡ್ಡ ತೆಗೆಯುವಂತೆ ಪೊಲೀಸ್ ಇನ್ ಸ್ಪೆಕ್ಟರ್ ಇಂಟೆಸರ್ ಅಲಿ ಅವರಿಗೆ ಮೂರು ಎಚ್ಚರಿಕೆ ನೀಡಲಾಗಿತ್ತು. ಅಲ್ಲದೆ ಗಡ್ಡ ಬೆಳೆಸಬೇಕೆಂದರೆ ಅನುಮತಿ ನೀಡಲಾಗಿತ್ತು. ಇದೆಲ್ಲಾವನ್ನು ಲೆಕ್ಕಿಸದೆ ಗಡ್ಡ ಬೆಳೆಸಿದ್ದಕ್ಕಾಗಿ ಅಲಿ ಅವರನ್ನು ಅಮಾತನು ಮಾಡಲಾಗಿದೆ. 

ಗಡ್ಡ ತೆಗೆಯುವಂತೆ ಶೋಕಾಸ್ ನೋಟಿಸ್ ಸಹ ನೀಡಲಾಗಿತ್ತು. ಆದರೆ ಇದಕ್ಕೆ ಉತ್ತರಿಸಿದೆ ಸುಮ್ಮನಿದ್ದರು. ಹೀಗಾಗಿ ಅಶಿಸ್ತು ತೋರಿದ ಹಿನ್ನೆಲೆಯಲ್ಲಿ ಅಲಿ ಅವರನ್ನು ಅಮಾನತಿನಲ್ಲಿಡಲಾಗಿದೆ ಎಂದು ಎಸ್ ಪಿ ಬಾಘ್ಪತ್ ಅಭಿಷೇಕ್ ಸಿಂಗ್ ತಿಳಿಸಿದ್ದಾರೆ. 

ಯಾರೇ ಆಗಲಿ ಗಡ್ಡ ಬೆಳೆಸಬೇಕೆಂದರೆ ಮೊದಲಿಗೆ ಅನುಮತಿ ಪಡೆಯಬೇಕು. ಆದರೆ ಇಂಟೆಸರ್ ಅಲಿ ಅನುಮತಿಯನ್ನು ಪಡೆದಿರಲಿಲ್ಲ. ಅಲ್ಲದೆ ಹಲವು ಬಾರಿ ಗಡ್ಡ ತೆಗೆಯುವಂತೆ ಎಚ್ಚರಿಸಲಾಗಿತ್ತು ಎಂದರು. 

ಅಮಾನತಿನ ಬಗ್ಗೆ ಪ್ರತಿಕ್ರಿಯಿಸಿರುವ ಅಲಿ, ಗಡ್ಡ ಬಿಡಲು ಅನುಮತಿ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT