ಕಾಂಗ್ರೆಸ್ ಶಾಸಕ ಜಿತು ಪತ್ವಾರಿ 
ದೇಶ

ಶಿವರಾಜ್ ಸಿಂಗ್ ಚೌಹ್ಹಾಣ್, ಕಮಲ್ ನಾಥ್ ಕಾಲಿನ ದೂಳಿಗೂ ಸಮಾನರಲ್ಲ- ಕಾಂಗ್ರೆಸ್ ಶಾಸಕ

 ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್, ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರ ಕಾಲಿನ ದೂಳಿಗೂ ಸಹ ಯೋಗ್ಯರಲ್ಲ ಎಂದು ಕಾಂಗ್ರೆಸ್ ಶಾಸಕ ಜಿತು ಪತ್ವಾರಿ ಹೇಳಿದ್ದಾರೆ.

ಖಾಂದ್ವಾ: ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್, ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರ ಕಾಲಿನ ದೂಳಿಗೂ ಸಹ ಯೋಗ್ಯರಲ್ಲ ಎಂದು ಕಾಂಗ್ರೆಸ್ ಶಾಸಕ ಜಿತು ಪತ್ವಾರಿ ಹೇಳಿದ್ದಾರೆ.

ಖಾಂದ್ವಾ ಜಿಲ್ಲೆಯ ಮಾಂಧತದಲ್ಲಿ ಚುನಾವಣಾ ಸಭೆಯಲ್ಲಿ ಮಾತನಾಡಿದ ಪತ್ವಾರಿ,  ಅನಿಲ್ , ಮುಖೇಶ್ ಅಂಬಾನಿ, ರತನ್ ಟಾಟಾ ಅವರಂತಹ ದೊಡ್ಡ ಉದ್ಯಮಿಗಳು ಹೆಸರು ಕೇಳಿದ್ದೇವೆ.  ಅಂತಹ ಉದ್ಯಮಿಗಳನ್ನು ಕಮಲ್ ನಾಥ್ ಕರೆಯುತ್ತಾರೆ. ಅದು ಕಮಲ್ ನಾಥ್ ಅವರ ವ್ಯಕ್ತಿತ್ವ. ಶಿವರಾಜ್ ಸಿಂಗ್ ಚೌಹ್ಹಾಣ್, ಕಮಲ್ ನಾಥ್ ಅವರ ಕಾಲಿನ ದೂಳಿಗೂ ಸಮಾನರಲ್ಲ ಎಂದರು.

ಆತ್ಮಪೂರ್ವಕವಾಗಿ ಹೀಗೆ ಹೇಳುತ್ತಿದ್ದೇನೆ. ಇದು ರಾಜಕಾರಣವಲ್ಲ,  ಕಮಲ್ ನಾಥ್ ಮಧ್ಯಪ್ರದೇಶವನ್ನು ಅಭಿವೃದ್ಧಿಪಡಿಸಲು ಬಯಸುತ್ತಾರೆ ಎಂದು ಪತ್ವಾರಿ ಹೇಳಿದರು.

ಈ ಹಿಂದೆ ಮಾತನಾಡಿದ್ದ ಕಾಂಗ್ರೆಸ್ ಮುಖಂಡ ದಿನೇಶ್ ಗುರ್ಜರ್, ಶಿವರಾಜ್ ಸಿಂಗ್ ಅವರಂತೆ ಬಡ ಕುಟುಂಬದಿಂದ ಕಮಲ್ ನಾಥ್ ಬಂದಿಲ್ಲ.  ಕಮಲ್ ನಾಥ್ ದೇಶದ ನಂಬರ್ 2 ಉದ್ಯಮಿ,5 ಎಕರೆ ಜಮೀನು ಹೊಂದಿದ್ದ ಶಿವರಾಜ್ ಸಿಂಗ್ ಚೌಹ್ಹಾಣ್ ಈಗ ಬಡವರ ರಕ್ತ ಕುಡಿದು ಸಾವಿರಾರು ಎಕರೆ ಜಮೀನು ಹೊಂದಿದ್ದಾರೆ ಎಂದು ಆರೋಪಿಸಿದ್ದರು.

ಮಧ್ಯಪ್ರದೇಶ ವಿಧಾನಸಭೆಯ 28 ಸ್ಥಾನಗಳಿಗೆ ನವೆಂಬರ್ 3 ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 10 ರಂದು ಮತ ಎಣಿಕೆ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT