ದೊರೈಕಣ್ಣಾ 
ದೇಶ

ಕೊರೋನಾಗೆ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಕೃಷಿ ಸಚಿವ ದೊರೈಕಣ್ಣಾ ಸ್ಥಿತಿ ಗಂಭೀರ

ಕೊರೋನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಕೃಷಿ ಸಚಿವ ಆರ್ ದೊರೈಕಣ್ಣಾ ಸ್ಥಿತಿ ಗಂಭೀರವಾಗಿದ್ದು, ಜೀವ ರಕ್ಷಕ ಅಳವಡಿಸಲಾಗಿದೆ ಎಂದು ಕಾವೇರಿ ಆಸ್ಪತ್ರೆ ಭಾನುವಾರ ತಿಳಿಸಿದೆ.

ಚೆನ್ನೈ: ಕೊರೋನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಕೃಷಿ ಸಚಿವ ಆರ್ ದೊರೈಕಣ್ಣಾ ಸ್ಥಿತಿ ಗಂಭೀರವಾಗಿದ್ದು, ಜೀವ ರಕ್ಷಕ ಅಳವಡಿಸಲಾಗಿದೆ ಎಂದು ಕಾವೇರಿ ಆಸ್ಪತ್ರೆ ಭಾನುವಾರ ತಿಳಿಸಿದೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದೊರೈಕಣ್ಣಾ ಅವರು ಅಕ್ಟೋಬರ್ 13ರಂದು ಕೋವಿಡ್-19 ಪರೀಕ್ಷೆ ಮಾಡಿಸಿದ್ದರು. ವರದಿ ಪಾಸಿಟಿವ್ ಬಂದಿದ್ದರಿಂದ ನಗರದ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು.

ಸಚಿವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚಿನ ಸಿಟಿ ಸ್ಕ್ಯಾನ್ ವರದಿಯಲ್ಲಿ ಅವರ ಸ್ವಾಶಕೋಶದಲ್ಲಿ ಶೇ.90ರಷ್ಟು ಸೋಂಕು ಇದೆ. ಅವರಿಗೆ ಇಸಿಎಂಒ ಮತ್ತು ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಕೃಷಿ ಸಚಿವರ ಆರೋಗ್ಯ ವಿಚಾರಿಸಿದರು ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಚರ್ಚಿಸಿದರು. ತಜ್ಞ ವೈದ್ಯರ ತಂಡ ಸಚಿವರ ಆರೋಗ್ಯದ ಮೇಲೆ ನಿಗಾ ವಹಿಸಿದೆ ಎಂದು ಆಸ್ಪತ್ರೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT