ಮಾಜಿ ಕೇಂದ್ರ ಸಚಿವ ದಿಲೀಪ್ ರೇ 
ದೇಶ

ಕಲ್ಲಿದ್ದಲು ಹಗರಣ: ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಗೆ 3 ವರ್ಷ ಜೈಲು ಶಿಕ್ಷೆ

1999ರ ಜಾರ್ಖಂಡ್ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ.

ರಾಂಚಿ: 1999ರ ಜಾರ್ಖಂಡ್ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ.

ಸುದೀರ್ಘ ವಿಚಾರಣೆ ಬಳಿಕ ಜಾರ್ಖಂಡ್ ಸಿಬಿಐ ವಿಶೇಷ ನ್ಯಾಯಾಲಯವು ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು, ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ. ದಿಲೀಪ್ ರೇ ವಿರುದ್ಧದ ಆರೋಪ ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಕಳೆದ ವಾರ ಕೋರ್ಟ್ ಇವರನ್ನು ಅಪರಾಧಿ ಎಂದು ಘೋಷಿಸಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು  ಪ್ರಕಟಿಸಿರಲಿಲ್ಲ. ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗಿದ್ದು, ಮೂರು ವರ್ಷಶಿಕ್ಷೆ ವಿಧಿಸಲಾಗಿದೆ.

ಇನ್ನು ದಿಲೀಪ್ ರೇ ಅವರು, ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರದಲ್ಲಿ ಕಲ್ಲಿದ್ದಲು ಇಲಾಖೆಯ ರಾಜ್ಯ ಸಚಿವರಾಗಿದ್ದರು. ದಿಲೀಪ್ ರೇ ಜತೆ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್, ಕ್ಯಾಸ್ಪ್ಯಾನ್ ಟೆಕ್ನಾಲಜೀಸ್ ಲಿಮಿಟೆಡ್  (ಸಿಟಿಎಲ್)ನ ನಿರ್ದೇಶಕ ಮಹೇಂದ್ರ ಕುಮಾರ್‌ ಅಗರ್‌ವಾಲ್ ಅವರಿಗೂ ಮೂರು ವರ್ಷ ಶಿಕ್ಷೆ ವಿಧಿಸಲಾಗಿದೆ.

ಜಾರ್ಖಂಡ್‌ನ ಗಿರಿದಿಹ್ನಲ್ಲಿರುವ ಬ್ರಹ್ಮದಿಹಾ ಕಲ್ಲಿದ್ದಲು ಬ್ಯಾಕ್ ಅನ್ನು 1999ರಲ್ಲಿ ಕ್ಯಾಸ್ಪ್ಯಾನ್ ಟೆಕ್ನಾಲಜೀರ್ ಲಿಮೀಟಿಚ್‌ಗೆ ಅಕ್ರಮವಾಗಿ ಹಂಚಿಕೆ ಮಾಡಿರುವ ಪ್ರಕರಣ ಇದಾಗಿದೆ. ಜಾರ್ಖಂಡ್ ಕಲ್ಲಿದ್ದಲು ಗಣಿ ಮತ್ತು ನಿಕ್ಷೇಪಗಳ ಹಂಚಿಕೆಗೆ ಸಂಬಂಧಿಸಿದಂತೆ ಭಾರೀ ಪ್ರಮಾಣದ ಅಕ್ರಮ ಮತ್ತು ಅವ್ಯವಹಾರ ನಡೆದಿತ್ತು  ಎಂದು ಆರೋಪಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?