ರಾಹುಲ್ ಶೆಟ್ಟಿ 
ದೇಶ

ಲೊನಾವಾಲ: ಗುಂಡಿಕ್ಕಿ ಶಿವಸೇನಾ ಮುಖಂಡನ ಹತ್ಯೆ 

 ಮಹಾರಾಷ್ಟ್ರದ ಲೊನಾವಾಲದಲ್ಲಿ ಶಿವಸೇನೆಯ ಮುಖಂಡನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯ ಪುತ್ರ ರಾಹುಲ್ ಶೆಟ್ಟಿಯನ್ನು ಇಂದು ಬೆಳಗ್ಗೆ 9-30ರ ಸುಮಾರಿನಲ್ಲಿ ಗುಂಡಿಟ್ಟು ಹತ್ಯೆ ಗೈಯಲಾಗಿದೆ.

ಲೊನಾವಾಲ: ಮಹಾರಾಷ್ಟ್ರದ ಲೊನಾವಾಲದಲ್ಲಿ ಶಿವಸೇನೆಯ ಮುಖಂಡನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯ ಪುತ್ರ ರಾಹುಲ್ ಶೆಟ್ಟಿಯನ್ನು ಇಂದು ಬೆಳಗ್ಗೆ 9-30ರ ಸುಮಾರಿನಲ್ಲಿ ಗುಂಡಿಟ್ಟು ಹತ್ಯೆ ಗೈಯಲಾಗಿದೆ.

43 ವರ್ಷದ ಶಿವಸೇನಾ ಸ್ಥಳೀಯ ಘಟಕದ ಮಾಜಿ ಅಧ್ಯಕ್ಷನಾಗಿದ್ದ ರಾಹುಲ್ ಶೆಟ್ಟಿಯ ಮನೆ ಮಂದೆ ಆತನ ಕುತ್ತಿಗೆಗೆ ಇರಿದು ಮೂರು ಬಾರಿ ಗುಂಡು ಹಾರಿಸಲಾಗಿದೆ.  ಕೂಡಲೇ ರಾಹುಲ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದಾಗ್ಯೂ, ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮನೆ ಮುಂದಿನ ಅಂಗಡಿಯೊಂದರ ಬಳಿ ರಾಹುಲ್ ಟೀ ಕುಡಿಯುತ್ತಿದ್ದಾಗ ದಾಳಿ ಮಾಡಲಾಗಿದೆ. ಆತನ ತಲೆ ಹಾಗೂ ಎದೆಗೆ ಮೂರು ಗುಂಡುಗಳನ್ನು ದುಷ್ಕರ್ಮಿಗಳು ಹಾರಿಸಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪೊಲೀಸರು ಹತ್ಯೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿಯನ್ನು ವಶಕ್ಕೆ ಪಡೆದಿದ್ದು, ಶಂಕಿತ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಘಟನೆ  ಬಗ್ಗೆ ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT