ಅಜಿತ್ ದೋವಲ್ 
ದೇಶ

ವಿದೇಶಿ ನೆಲದಲ್ಲೂ ನಿಂತು ನಮ್ಮ ಶತ್ರುಗಳನ್ನು ಎದುರಿಸುವ ತಾಕತ್ತು ಈಗ ಭಾರತಕ್ಕಿದೆ: ಅಜಿತ್ ದೋವಲ್

ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ಉಂಟು ಮಾಡಲು ಯಾರಾದರು ಯತ್ನಿಸಿದರೆ ಅವರನ್ನು ವಿದೇಶಿ ನೆಲದಲ್ಲೂ ನಿಂತು ಎದುರಿಸುವ ತಾಕತ್ತು ಈಗ ಭಾರತಕ್ಕಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಪರೋಕ್ಷವಾಗಿ ಚೀನಾಗೆ ಟಾಂಗ್ ನೀಡಿದ್ದಾರೆ.

ನವದೆಹಲಿ: ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ಉಂಟು ಮಾಡಲು ಯಾರಾದರು ಯತ್ನಿಸಿದರೆ ಅವರನ್ನು ವಿದೇಶಿ ನೆಲದಲ್ಲೂ ನಿಂತು ಎದುರಿಸುವ ತಾಕತ್ತು ಈಗ ಭಾರತಕ್ಕಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಪರೋಕ್ಷವಾಗಿ ಚೀನಾಗೆ ಟಾಂಗ್ ನೀಡಿದ್ದಾರೆ. 

ಭಾರತ ಇಲ್ಲಿಯವರೆಗೂ ಯಾರ ಮೇಲೂ ಮೊದಲಿಗೆ ದಾಳಿ ಮಾಡಿಲ್ಲ. ಆದರೆ ಹೊಸ ಕಾರ್ಯತಂತ್ರದ ಭಾಗವಾಗಿ ಭದ್ರತಾ ಬೆದರಿಕೆಗಳನ್ನು ಎದುರಿಸಲು ನಾವು ಪೂರ್ವಭಾವಿಯಾಗಿ ಕಾರ್ಯನಿರ್ವಹಿಸುತ್ತೇವೆ ಎಂದು ಹೇಳಿದ್ದಾರೆ. ಪೂರ್ವ ಲಡಾಖ್ ನಲ್ಲಿ ಚೀನಾ ಸೇನೆ ಉಪಟಳ ನೀಡುತ್ತಿರುವ ಬೆನ್ನಲ್ಲೇ ಅಜಿತ್ ದೋವಲ್ ರ ಈ ಹೇಳಿಕೆ ಹೆಚ್ಚು ಮಹತ್ವ ಪಡೆದುಕೊಂಡಿದೆ. 

ರಿಷಿಕೇಶದಲ್ಲಿ ಪರಮಾರ್ಥ್ ನಿಕೇತನ್ ಆಶ್ರಮದಲ್ಲಿ ಮಾತನಾಡಿದ ಅಜಿತ್ ದೋವಲ್ ಅವರು ನಮ್ಮ ಶತ್ರುಗಳನ್ನು ಎದುರಿಸಲು ನಮ್ಮ ನೆಲವೇ ಅಲ್ಲ. ವಿದೇಶಿ ನೆಲದಲ್ಲೂ ನಿಂತು ಹೋರಾಟ ಮಾಡುತ್ತೇವೆ. ಎಲ್ಲಿಂದ ನಮಗೆ ಬೆದರಿಕೆ ಬರುತ್ತದೆಯೋ ಅಲ್ಲಿಗೆ ಭಾರತ ಯುದ್ಧವನ್ನು ತೆಗೆದುಕೊಂಡು ಹೋಗುತ್ತದೆ ಎಂದು ಹೇಳಿದ್ದಾರೆ. 

ಇದೇ ವೇಳೆ ಅಜಿತ್ ದೋವಲ್ ಅವರು ಈ ಹೇಳಿಕೆಯನ್ನು ಯಾವುದೇ ಒಂದು ದೇಶವನ್ನು ಗುರಿಯಾಗಿಸಿಕೊಂಡು ಹೇಳಿದ್ದಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT