ಖುಷ್ಬೂ ಸುಂದರ್ 
ದೇಶ

ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ನಾಯಕಿ ಖುಷ್ಬೂ ಬಂಧನ

ವಿಸಿಕೆ ಅಧ್ಯಕ್ಷ ದೋಳ್ ತಿರುಮಾವಳವನ್ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಹಾಗೂ ಕೆಲವು ಬಿಜೆಪಿ ಸದಸ್ಯರನ್ನು ತಮಿಳುನಾಡಿನ ಮುಟ್ಟುಕಾಡುದಲ್ಲಿ  ಮಂಗಳವಾರ ಬಂಧಿಸಲಾಗಿದೆ.

ಚೆನ್ನೈ: ವಿಸಿಕೆ ಅಧ್ಯಕ್ಷ ದೋಳ್ ತಿರುಮಾವಳವನ್ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಹಾಗೂ ಕೆಲವು ಬಿಜೆಪಿ ಸದಸ್ಯರನ್ನು ತಮಿಳುನಾಡಿನ ಮುಟ್ಟುಕಾಡುದಲ್ಲಿ  ಮಂಗಳವಾರ ಬಂಧಿಸಲಾಗಿದೆ. 

ವಿಸಿಕೆ ಅಧ್ಯಕ್ಷ ದೋಳ್ ತಿರುಮಾವಳವನ್ ಅವರು ಮನುಸ್ಮೃತಿ ಉಲ್ಲೇಖಿಸಿ ಮಹಿಳೆಯರ ಬಗ್ಗೆ ಆಡಿದ್ದರು ಎನ್ನಲಾದ ಮಾತುಗಳ ವಿರುದ್ಧ ಬಿಜೆಪಿ ಪ್ರತಿಭಟನೆ ಆಯೋಜಿಸಿತ್ತು.  ಅದರಲ್ಲಿ ಪಾಲ್ಗೊಳ್ಳಲು ಖುಷ್ಬೂ ಅವರು ಚಿದಂಬರಂಗೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಅವರನ್ನು ಬಂಧಿಸಲಾಗಿದೆ. 

ಚಿದಂಬರಂನಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಸೋಮವಾರ ಅನುಮತಿ ನಿರಾಕರಿಸಿದ್ದರು. ಖುಷ್ಬೂ ಅವರ ಬಂಧನದ ಬೆನ್ನಲ್ಲೇ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆಟಿ ರಾಘವನ್ ಅವರನ್ನು ಮೇಲ್ಮರುವಥುರ್ ಸಮೀಪದ ಅಥುರ್ ಟೋಲ್‌ಗೇಟ್‌ನಲ್ಲಿ ಬಂಧಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮದಿಂದ ಅವರನ್ನು ಬಂಧಿಸಲಾಗಿದ್ದು, ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

'ಬಂಧನಕ್ಕೆ ಒಳಗಾಗಿದ್ದೇನೆ, ಮಹಿಳೆಯರ ಗೌರವಕ್ಕಾಗಿ ನಮ್ಮ ಕೊನೆ ಉಸಿರಿನವರೆಗೂ ಹೋರಾಡುತ್ತೇವೆ. ಗೌರವಾನ್ವಿತ ಪ್ರಧಾನಿ
ನರೇಂದ್ರ ಮೋದಿ ಅವರು ಯಾವಾಗಲೂ ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡುತ್ತಾರೆ. ನಾವು ಅವರ ಹಾದಿಯಲ್ಲಿ ಸಾಗುತ್ತಿದ್ದೇವೆ. ಕೆಲವು ಕೆಟ್ಟ ವ್ಯಕ್ತಿಗಳ ದೌರ್ಜನ್ಯಕ್ಕೆ ನಾವು ಮಂಡಿಯೂರುವುದಿಲ್ಲ. ಭಾರತ್ ಮಾತಾ ಕಿ ಜೈ' ಎಂದು ಖುಷ್ಬೂ ಟ್ವೀಟ್ ಮಾಡಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT