ಯೋಗೇಶ್ ತ್ಯಾಗಿ 
ದೇಶ

ದೆಹಲಿ ವಿಶ್ವವಿದ್ಯಾಲಯದ ಉಪಕುಲಪತಿ ಯೋಗೇಶ್ ತ್ಯಾಗಿ ಅಮಾನತು

ಆಡಳಿತಾತ್ಮಕ ವಿಫಲತೆಯ  ಆರೋಪದ ನಡುವೆ ದೆಹಲಿ ವಿಶ್ವವಿದ್ಯಾಲಯದ ಉಪಕುಲಪತಿ ಯೋಗೇಶ್ ತ್ಯಾಗಿ ಅವರನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಆದೇಶದ ಮೇರೆಗೆ ಅಮಾನತುಗೊಳಿಸಲಾಗಿದೆ

ನವದೆಹಲಿ: ಆಡಳಿತಾತ್ಮಕ ವಿಫಲತೆಯ  ಆರೋಪದ ನಡುವೆ ದೆಹಲಿ ವಿಶ್ವವಿದ್ಯಾಲಯದ ಉಪಕುಲಪತಿ ಯೋಗೇಶ್ ತ್ಯಾಗಿ ಅವರನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಆದೇಶದ ಮೇರೆಗೆ ಅಮಾನತುಗೊಳಿಸಲಾಗಿದೆ

"ದೆಹಲಿ ವಿಶ್ವವಿದ್ಯಾಲಯದ ಉಪಕುಲಪತಿ ಯೋಗೇಶ್ ತ್ಯಾಗಿ ಅವರು ರಾಷ್ಟ್ರಪತಿಆದೇಶದ ಮೇರೆಗೆ ಅಮಾನತುಗೊಂಡಿದ್ದಾರೆ. ಈಗ ಅಮಾನತುಗೊಂಡಿರುವ ಡಿಯು ವಿಸಿ ಯೋಗೇಶ್ ತ್ಯಾಗಿ ಅವರು ವೈದ್ಯಕೀಯ ನೆಲೆಯಲ್ಲಿ ಅನುಪಸ್ಥಿತಿಯ ಅವಧಿಯಲ್ಲಿ ಹೊರಡಿಸಿದ ಆದೇಶಗಳನ್ನು ಶೂನ್ಯ ಮತ್ತು ಅನೂರ್ಜಿತವೆಂದು ಪರಿಗಣಿಸಲಾಗುತ್ತದೆ" ಎಂದು ಶಿಕ್ಷಣ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಆಡಳಿತಾತ್ಮಕ ವೈಫಲ್ಯದ ಕಾರಣ ದೆಹಲಿ ವಿವಿಉಪಕುಲಪತಿ ಯೋಗೇಶ್ ತ್ಯಾಗಿ ವಿರುದ್ಧ ತನಿಖೆ ನಡೆಸಲು ಶಿಕ್ಷಣ ಸಚಿವಾಲಯದ ಶಿಫಾರಸುಗಳನ್ನು ದೆಹಲಿ ವಿಶ್ವವಿದ್ಯಾಲಯ ವಿಸಿಟರ್  ರಾಷ್ಟ್ರಪತಿ ಮಂಗಳವಾರ ಅಂಗೀಕರಿಸಿದ್ದರು.  "ಉಪಕುಲಪತಿಗಳು (ಶಾಸನಬದ್ಧ) ನಿಬಂಧನೆಗಳಿಗೆ ಅನುಗುಣವಾಗಿ ವಿಶ್ವವಿದ್ಯಾನಿಲಯವನ್ನು ನಿರ್ವಹಿಸುತ್ತಿಲ್ಲ ... ಇದು ದೆಹಲಿ ವಿಶ್ವವಿದ್ಯಾಲಯದ ತಪ್ಪು ಆಡಳಿತ ಮತ್ತು ಅಸಮರ್ಪಕ ಕಾರ್ಯಕ್ಕೆ ಕಾರಣವಾಗಿದೆ. ಇದು ವಿಶ್ವವಿದ್ಯಾಲಯದ ಸೂಕ್ತ ಶೈಕ್ಷಣಿಕ ಮತ್ತು ಆಡಳಿತಾತ್ಮಕ ವಾತಾವರಣಕ್ಕೆ ಅನುಕೂಲಕರವಲ್ಲ ಭಾರತದ ರಾಷ್ಟ್ರಪತಿಗಳು ವಿಶ್ವವಿದ್ಯಾನಿಲಯದ ವಿಸಿಟರ್ ದಾಖಲೆಯಲ್ಲಿ ಲಭ್ಯವಿರುವ ಸಂಗತಿಗಳು ಮತ್ತು ಅಂಶಗಳನ್ನು ಪರಿಗಣಿಸಿ, ಕರ್ತವ್ಯಗಳ ಅಪಮೌಲ್ಯ ಬದ್ಧತೆ ಯ ಕೊರತೆಯ ಆರೋಪಗಳ ಬಗ್ಗೆ ತನಿಖೆ ನಡೆಸಲು ಆದೇಶಿಸಿದ್ದಾರೆ. ರಾಷ್ಟ್ರಪತಿಗಳು  ನ್ಯಾಯಯುತ ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು ಯೋಗೇಶ್ ತ್ಯಾಗಿ ಅವರನ್ನು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು / ಬಲವಂತಪಡಿಸಬಹುದು ಮತ್ತು ವಿಶ್ವವಿದ್ಯಾನಿಲಯದ ವಸ್ತು ದಾಖಲೆಗಳನ್ನು ಹಾಳುಮಾಡಬಹುದು ಎಂಬ ಕಾರಣಕ್ಕೆ ಮುಂದಿನ ಆದೇಶದವರೆಗೆ ತಕ್ಷಣದ ಪರಿಣಾಮ ಬೀರುವಂತೆ ಅಮಾನತುಗೊಳಿಸಿದ್ದಾರೆ." ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT