ಸಾಂದರ್ಭಿಕ ಚಿತ್ರ 
ದೇಶ

ನೂತನ ಕೃಷಿ ಮಸೂದೆ: ನವಂಬರ್ 5 ರಂದು ದೇಶಾದ್ಯಂತ ರಸ್ತೆತಡೆ ನಡೆಸಲು ರೈತ ಸಂಘಟನೆಗಳ ತೀರ್ಮಾನ

ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಹಲವು ರೈತ ಸಂಘಟನೆಗಳು ನವೆಂಬರ್ 5ರಂದು ದೇಶಾದ್ಯಂತ ರಸ್ತೆ ತಡೆ ನಡೆಸುವುದಾಗಿ ತಿಳಿಸಿವೆ.

ಚಂಡೀಗಢ: ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಹಲವು ರೈತ ಸಂಘಟನೆಗಳು ನವೆಂಬರ್ 5ರಂದು ದೇಶಾದ್ಯಂತ ರಸ್ತೆ ತಡೆ ನಡೆಸುವುದಾಗಿ ತಿಳಿಸಿವೆ.

ದೆಹಲಿಯಲ್ಲಿ ನಿನ್ನೆ ನಡೆದ ಸಭೆಯಲ್ಲಿ, ಕೇಂದ್ರ ಸರ್ಕಾರದ ಮೂರು ರೈತ ವಿರೋಧಿ, ಜನ ವಿರೋಧಿ ಕೃಷಿ ಮಸೂದೆ ಮತ್ತು ಉದ್ದೇಶಿತ ವಿದ್ಯುದ್ದೀಕರಣ(ತಿದ್ದುಪಡಿ) ಮಸೂದೆ 2020ನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಯನ್ನು ತೀವ್ರಗೊಳಿಸಲು ವಿವಿಧ ರೈತ ಸಂಘಟನೆಗಳ ಮಧ್ಯೆ ಸಂಪೂರ್ಣ ಸಮನ್ವಯತೆ ಸಾಧಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿವೆ.

500ಕ್ಕೂ ಹೆಚ್ಚು ಸಾಂಸ್ಥಿಕ ಸಂಘಟನೆಗಳನ್ನೊಳಗೊಂಡ ಪ್ರಮುಖ ರೈತ ಸಂಘಟನೆಗಳು, ಇಡೀ ಕಾರ್ಯಗುಂಪುಗಳು ಮತ್ತು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ರಾಜ್ಯ ಪ್ರತಿನಿಧಿಗಳು, ರೈತ ಮುಖಂಡ ಬಿಕೆಯು(ರಾಜೇವಲ್) ಬಲ್ಬೀರ್ ಸಿಂಗ್ ರಾಜೇವಲ್ ನೇತೃತ್ವದ ಸಂಘಟನೆಗಳು ಮತ್ತು ಹರ್ಯಾಣ ಬಿಕೆಯು ಮುಖ್ಯಸ್ಥ ಗುರ್ನಮ್ ಸಿಂಗ್ ನಿನ್ನೆ ದೆಹಲಿಯಲ್ಲಿ ಸಭೆ ನಡೆಸಿ ದೇಶಾದ್ಯಂತ ನವೆಂಬರ್ 5ರಂದು ರಸ್ತೆ ತಡೆ ನಡೆಸಲು ಮತ್ತು ನವೆಂಬರ್ 26-27ರಂದು ದೆಹಲಿಯಲ್ಲಿ 'ದೆಹಲಿ ಚಲೋ' ಕೈಗೊಳ್ಳಲು ತೀರ್ಮಾನಿಸಿವೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT