ತೇಜಸ್ವಿ ಯಾದವ್ 
ದೇಶ

ಜಂಗಲ್ ರಾಜ್ ಕ ಯುವರಾಜ್' ಪ್ರಧಾನಿ ಮೋದಿ ಹೇಳಿಕೆಗೆ ತೇಜಸ್ವಿ ಯಾದವ್ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರ, ನಿರುದ್ಯೋಗ ಮತ್ತು ವಲಸೆ ಕಾರ್ಮಿಕರ ಸಮಸ್ಯೆಯಂತಹ ವಾಸ್ತವ ಸಂಗತಿಗಳನ್ನು ಮರೆಮಾಚಿ ಅನಗತ್ಯ ವಿಷಯಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಬಿಹಾರದಲ್ಲಿ ವಿರೋಧ ಪಕ್ಷ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಆರೋಪಿಸಿದ್ದಾರೆ.

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರ, ನಿರುದ್ಯೋಗ ಮತ್ತು ವಲಸೆ ಕಾರ್ಮಿಕರ ಸಮಸ್ಯೆಯಂತಹ ವಾಸ್ತವ ಸಂಗತಿಗಳನ್ನು ಮರೆಮಾಚಿ ಅನಗತ್ಯ ವಿಷಯಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಬಿಹಾರದಲ್ಲಿ ವಿರೋಧ ಪಕ್ಷ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಆರೋಪಿಸಿದ್ದಾರೆ.

ನಿನ್ನೆ ಪ್ರಧಾನಿಯವರು ಬಿಹಾರದಲ್ಲಿ ಎರಡನೇ ಸುತ್ತಿನ ಪ್ರಚಾರದ ವೇಳೆ ತೇಜಸ್ವಿ ಯಾದವ್ ಅವರನ್ನು ಜಂಗಲ್ ರಾಜ್ ಕ ಯುವರಾಜ್ ಎಂದು ಸಂಬೋಧಿಸಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿ, ಮೋದಿಯವರು ದೇಶದ ಪ್ರಧಾನ ಮಂತ್ರಿ, ಅವರು ಏನು ಬೇಕಾದರೂ ಹೇಳಬಹುದು, ಅದಕ್ಕೆ ಪ್ರತಿಕ್ರಿಯೆ ನೀಡಲು ನನಗೆ ಇಷ್ಟವಿಲ್ಲ. ಆದರೆ ಅವರು ಬಂದಿದ್ದು ಬಿಹಾರಕ್ಕೆ. ಇಲ್ಲಿಗೆ ಬಂದು ಚುನಾವಣೆ ಸಂದರ್ಭದಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ, ನಿರುದ್ಯೋಗ ಸಮಸ್ಯೆ, ಇನ್ನೂ ಅನೇಕ ಪ್ರಮುಖ ವಿಷಯಗಳ ಬಗ್ಗೆ ಮಾತನಾಡಬಹುದಾಗಿತ್ತು. ಅದು ಬಿಟ್ಟು ಅನಗತ್ಯ ವಿಷಯಗಳನ್ನು ಮಾತನಾಡಿ ಹೋಗಿದ್ದಾರೆ ಎಂದರು.

ಬಿಜೆಪಿ ವಿಶ್ವದಲ್ಲಿ ಅತಿದೊಡ್ಡ ಪಕ್ಷವಾಗಿದೆ. 30 ಹೆಲಿಕಾಪ್ಟರ್ ಬಳಸುತ್ತಿದ್ದಾರೆ. ಅಂತಹ ಪಕ್ಷದ ಪ್ರಧಾನಿ ಹೀಗೆ ಮಾತನಾಡಿದರೆ ದೇಶದ ಜನರು ತೀರ್ಮಾನ ಮಾಡುತ್ತಾರೆ. ಅವರು ಬಡತನ, ನಿರುದ್ಯೋಗ ಸಮಸ್ಯೆ, ರೈತರು, ಕಾರ್ಖಾನೆಗಳ ಸಮಸ್ಯೆಗಳ ಬಗ್ಗೆ ಮಾತನಾಡಬಹುದಿತ್ತಲ್ಲವೇ ಎಂದು 31 ವರ್ಷದ ತೇಜಸ್ವಿ ಯಾದವ್ ಕೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT