ಸಂಗ್ರಹ ಚಿತ್ರ 
ದೇಶ

ಮುಂಗರ್ ಫೈರಿಂಗ್ ಹಿಂದುತ್ವದ ಮೇಲಿನ ದಾಳಿ: ಶಿವಸೇನೆ

ಮುಂಗರ್ ಫೈರಿಂಗ್ ಹಿಂದುತ್ವದ ಮೇಲಿನ ದಾಳಿಯಾಗಿದ್ದು,  ಬಿಜೆಪಿ ನಾಯಕರು ಏಕೆ ಪ್ರಶ್ನೆ ಮಾಡುತ್ತಿಲ್ಲ ಎಂದು ಶಿವ ಸೇನೆಯ ನಾಯಕ ಸಂಜಯ್ ರೌತ್ ಪ್ರಶ್ನಿಸಿದ್ದಾರೆ. 

ಮುಂಬೈ: ಮುಂಗರ್ ಫೈರಿಂಗ್ ಹಿಂದುತ್ವದ ಮೇಲಿನ ದಾಳಿಯಾಗಿದ್ದು,  ಬಿಜೆಪಿ ನಾಯಕರು ಏಕೆ ಪ್ರಶ್ನೆ ಮಾಡುತ್ತಿಲ್ಲ ಎಂದು ಶಿವ ಸೇನೆಯ ನಾಯಕ ಸಂಜಯ್ ರೌತ್ ಪ್ರಶ್ನಿಸಿದ್ದಾರೆ. 

"ದುರ್ಗಾ ದೇವಿಯ ವಿಸರ್ಜನೆ ಸಂದರ್ಭದಲ್ಲಿ ಬಿಹಾರದ ಮುಂಗರ್ ನಲ್ಲಿ ಘರ್ಷಣೆ ನಡೆದು, ಪರಿಸ್ಥಿತಿ ತಹಬದಿಗೆ ತರಲು ಪೊಲೀಸರು ಫೈರಿಂಗ್ ನಡೆಸಿದ್ದರು. ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದರೆ ಹಲವರು ಗಾಯಗೊಂಡಿದ್ದರು. ಈ ಘಟನೆ ಹಿಂದುತ್ವದ ಮೇಲೆ ನಡೆದ ದಾಳಿಯಾಗಿದೆ." ಎಂದು ಸಂಜಯ್ ರೌತ್ ಆರೋಪಿಸಿದ್ದಾರೆ. 

ಇದೇ ಘಟನೆ ಏನಾದರೂ ಮಹಾರಾಷ್ಟ್ರ ಅಥವಾ ಪಶ್ಚಿಮ ಬಂಗಾಳಗಳಲ್ಲಿ ನಡೆದಿದ್ದರೆ ಬಿಜೆಪಿ ಹಾಗೂ ಅವರ ರಾಜ್ಯಪಾಲರು ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹಿಸುತ್ತಿದ್ದರು. ಆದರೆ ಈಗ ಬಿಹಾರದಲ್ಲಿ ನಡೆದಿದ್ದು ರಾಜ್ಯಪಾಲರು ಹಾಗೂ ಬಿಜೆಪಿ ನಾಯಕರು ಏಕೆ ಸುಮ್ಮನಿದ್ದಾರೆ ಎಂದು ರೌತ್ ಪ್ರಶ್ನಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಮುಂಗರ್ ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ ಎಸ್ ಪಿಯನ್ನು ತೆಗೆದುಹಾಕಲು ಆದೇಶ ನೀಡಿದೆ. ಮಗಧದ ವಿಭಾಗೀಯ ಆಯುಕ್ತರಿಂದ ತನಿಖೆ ನಡೆಸಲು ಆದೇಶಿಸಲಾಗಿದ್ದು, 7 ದಿನಗಳಲ್ಲಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

27 ವರ್ಷದಲ್ಲಿ 3 ಗಗನ ಯಾತ್ರೆ: 608 ದಿನಗಳ ಬಾಹ್ಯಾಕಾಶ ವಾಸ; ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್​ ನಿವೃತ್ತಿ!

'ಮದರ್ ಆಫ್ ಆಲ್ ಡೀಲ್': ಭಾರತ-ಯುರೋಪಿಯನ್ ಒಕ್ಕೂಟದ FTA ಮಾತುಕತೆ ಅಂತಿಮ ಹಂತಕ್ಕೆ!

ರಾಜ್ಯಗಳ ಮೇಲೆ ಕೇಂದ್ರದ ನಿಯಂತ್ರಣ; ಶೀಘ್ರದಲ್ಲೇ ದಕ್ಷಿಣ ಭಾರತದ ಸಿಎಂಗಳ ಸಮ್ಮೇಳನ: ಸಿದ್ದರಾಮಯ್ಯ

ರಾಯಚೂರು: ಸಿಂಧನೂರು ಬಳಿ ಭೀಕರ ಸರಣಿ ಅಪಘಾತ; ಐವರು ಸ್ಥಳದಲ್ಲೇ ಸಾವು

ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಅವಿರೋಧ ಆಯ್ಕೆ

SCROLL FOR NEXT