ಸಂಗ್ರಹ ಚಿತ್ರ 
ದೇಶ

ಮುಂಗರ್ ಫೈರಿಂಗ್ ಹಿಂದುತ್ವದ ಮೇಲಿನ ದಾಳಿ: ಶಿವಸೇನೆ

ಮುಂಗರ್ ಫೈರಿಂಗ್ ಹಿಂದುತ್ವದ ಮೇಲಿನ ದಾಳಿಯಾಗಿದ್ದು,  ಬಿಜೆಪಿ ನಾಯಕರು ಏಕೆ ಪ್ರಶ್ನೆ ಮಾಡುತ್ತಿಲ್ಲ ಎಂದು ಶಿವ ಸೇನೆಯ ನಾಯಕ ಸಂಜಯ್ ರೌತ್ ಪ್ರಶ್ನಿಸಿದ್ದಾರೆ. 

ಮುಂಬೈ: ಮುಂಗರ್ ಫೈರಿಂಗ್ ಹಿಂದುತ್ವದ ಮೇಲಿನ ದಾಳಿಯಾಗಿದ್ದು,  ಬಿಜೆಪಿ ನಾಯಕರು ಏಕೆ ಪ್ರಶ್ನೆ ಮಾಡುತ್ತಿಲ್ಲ ಎಂದು ಶಿವ ಸೇನೆಯ ನಾಯಕ ಸಂಜಯ್ ರೌತ್ ಪ್ರಶ್ನಿಸಿದ್ದಾರೆ. 

"ದುರ್ಗಾ ದೇವಿಯ ವಿಸರ್ಜನೆ ಸಂದರ್ಭದಲ್ಲಿ ಬಿಹಾರದ ಮುಂಗರ್ ನಲ್ಲಿ ಘರ್ಷಣೆ ನಡೆದು, ಪರಿಸ್ಥಿತಿ ತಹಬದಿಗೆ ತರಲು ಪೊಲೀಸರು ಫೈರಿಂಗ್ ನಡೆಸಿದ್ದರು. ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದರೆ ಹಲವರು ಗಾಯಗೊಂಡಿದ್ದರು. ಈ ಘಟನೆ ಹಿಂದುತ್ವದ ಮೇಲೆ ನಡೆದ ದಾಳಿಯಾಗಿದೆ." ಎಂದು ಸಂಜಯ್ ರೌತ್ ಆರೋಪಿಸಿದ್ದಾರೆ. 

ಇದೇ ಘಟನೆ ಏನಾದರೂ ಮಹಾರಾಷ್ಟ್ರ ಅಥವಾ ಪಶ್ಚಿಮ ಬಂಗಾಳಗಳಲ್ಲಿ ನಡೆದಿದ್ದರೆ ಬಿಜೆಪಿ ಹಾಗೂ ಅವರ ರಾಜ್ಯಪಾಲರು ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹಿಸುತ್ತಿದ್ದರು. ಆದರೆ ಈಗ ಬಿಹಾರದಲ್ಲಿ ನಡೆದಿದ್ದು ರಾಜ್ಯಪಾಲರು ಹಾಗೂ ಬಿಜೆಪಿ ನಾಯಕರು ಏಕೆ ಸುಮ್ಮನಿದ್ದಾರೆ ಎಂದು ರೌತ್ ಪ್ರಶ್ನಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಮುಂಗರ್ ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ ಎಸ್ ಪಿಯನ್ನು ತೆಗೆದುಹಾಕಲು ಆದೇಶ ನೀಡಿದೆ. ಮಗಧದ ವಿಭಾಗೀಯ ಆಯುಕ್ತರಿಂದ ತನಿಖೆ ನಡೆಸಲು ಆದೇಶಿಸಲಾಗಿದ್ದು, 7 ದಿನಗಳಲ್ಲಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT