ಕಾರ್ಗಿಲ್'ಗೆ ಭೇಟಿ ನೀಡಿರುವ ಒಮರ್ ಅಬ್ದುಲ್ಲಾ ನೇತೃತ್ವದ ಪೀಪಲ್ಸ್ ಅಲೈಯನ್ಸ್ ನಿಯೋಗ 
ದೇಶ

ಒಮರ್ ಅಬ್ದುಲ್ಲಾ ನೇತೃತ್ವದ ಪೀಪಲ್ಸ್ ಅಲೈಯನ್ಸ್ ನಿಯೋಗ ಕಾರ್ಗಿಲ್‌ಗೆ ಭೇಟಿ

ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ‘ಗುಪ್ಕಾರ್ ನಿರ್ಣಯಕ್ಕಾಗಿ ಜನರ ಮೈತ್ರಿ’ (ಪೀಪಲ್ಸ್ ಅಲಯೆನ್ಸ್) ನಿಯೋಗ ಶುಕ್ರವಾರ ಮುಂಜಾನೆ ಕೇಂದ್ರಾಡಳಿತ ಪ್ರದೇಶದ ಲಡಾಖ್‌ನ ಗಡಿ ಪಟ್ಟಣವಾದ ಕಾರ್ಗಿಲ್‌ಗೆ ತೆರಳಿದೆ.

ಶ್ರೀನಗರ: ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ‘ಗುಪ್ಕಾರ್ ನಿರ್ಣಯಕ್ಕಾಗಿ ಜನರ ಮೈತ್ರಿ’ (ಪೀಪಲ್ಸ್ ಅಲಯೆನ್ಸ್) ನಿಯೋಗ ಶುಕ್ರವಾರ ಮುಂಜಾನೆ ಕೇಂದ್ರಾಡಳಿತ ಪ್ರದೇಶದ ಲಡಾಖ್‌ನ ಗಡಿ ಪಟ್ಟಣವಾದ ಕಾರ್ಗಿಲ್‌ಗೆ ತೆರಳಿದೆ.

ಕಳೆದ ಆಗಸ್ಟ್ 5 ರಂದು 370 ಮತ್ತು 35 ಎ ನೇ ವಿಧಿಗಳನ್ನು ರದ್ದುಗೊಳಿಸಿದ ನಂತರ ಕಾರ್ಗಿಲ್‍ ಗೆ ಭೇಟಿ ನೀಡುತ್ತಿರುವ ಕಾಶ್ಮೀರದ ಮುಖ್ಯವಾಹಿನಿಯ ರಾಜಕೀಯ ನಾಯಕರ ನಿಯೋಗ ಇದಾಗಿದೆ. ಕಾರ್ಗಿಲ್‍ನಲ್ಲಿ ಜನರು ಹಿಂದಿನ ರಾಜ್ಯವನ್ನು ವಿಭಜನೆಗೆ ವಿರೋಧಿಸಿದ್ದಾರೆ. ರಾಜ್ಯವನ್ನು ಪುನರ್ ಸ್ಥಾಪನೆಗೆ ಒತ್ತಾಯಿಸಿದ್ದಾರೆ. ಅಲ್ಲದೆ, ಲಡಾಖ್ ಕೇಂದ್ರಾಡಳಿತ ಪ್ರದೇಶದ ಬದಲಿಗೆ ಜಮ್ಮು-ಕಾಶ್ಮೀರದ ಭಾಗವಾಗಿರಲು ಇಚ್ಛಿಸಿದ್ದಾರೆ.

ನಿಯೋಗ ಶುಕ್ರವಾರ ಮುಂಜಾನೆ ಬೇಸಿಗೆ ರಾಜಧಾನಿ ಶ್ರೀನಗರದಿಂದ ಹೊರಟು ಕಾರ್ಗಿಲ್‌ಗೆ ತೆರಳಿದೆ ಎಂದು ಮೂಲಗಳು ತಿಳಿಸಿವೆ. ನಿಯೋಗದ ಸದಸ್ಯರನ್ನು ಬರಮಾಡಿಕೊಳ್ಳಲು ಹೆಚ್ಚಿನ ಸಂಖ್ಯೆಯ ರಾಜಕೀಯ ಮುಖಂಡರು ಮತ್ತು ಕಾರ್ಯಕರ್ತರು ದ್ರಾಸ್‌ಗೆ ಧಾವಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT