ಕಾರ್ಗಿಲ್'ಗೆ ಭೇಟಿ ನೀಡಿರುವ ಒಮರ್ ಅಬ್ದುಲ್ಲಾ ನೇತೃತ್ವದ ಪೀಪಲ್ಸ್ ಅಲೈಯನ್ಸ್ ನಿಯೋಗ 
ದೇಶ

ಒಮರ್ ಅಬ್ದುಲ್ಲಾ ನೇತೃತ್ವದ ಪೀಪಲ್ಸ್ ಅಲೈಯನ್ಸ್ ನಿಯೋಗ ಕಾರ್ಗಿಲ್‌ಗೆ ಭೇಟಿ

ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ‘ಗುಪ್ಕಾರ್ ನಿರ್ಣಯಕ್ಕಾಗಿ ಜನರ ಮೈತ್ರಿ’ (ಪೀಪಲ್ಸ್ ಅಲಯೆನ್ಸ್) ನಿಯೋಗ ಶುಕ್ರವಾರ ಮುಂಜಾನೆ ಕೇಂದ್ರಾಡಳಿತ ಪ್ರದೇಶದ ಲಡಾಖ್‌ನ ಗಡಿ ಪಟ್ಟಣವಾದ ಕಾರ್ಗಿಲ್‌ಗೆ ತೆರಳಿದೆ.

ಶ್ರೀನಗರ: ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ‘ಗುಪ್ಕಾರ್ ನಿರ್ಣಯಕ್ಕಾಗಿ ಜನರ ಮೈತ್ರಿ’ (ಪೀಪಲ್ಸ್ ಅಲಯೆನ್ಸ್) ನಿಯೋಗ ಶುಕ್ರವಾರ ಮುಂಜಾನೆ ಕೇಂದ್ರಾಡಳಿತ ಪ್ರದೇಶದ ಲಡಾಖ್‌ನ ಗಡಿ ಪಟ್ಟಣವಾದ ಕಾರ್ಗಿಲ್‌ಗೆ ತೆರಳಿದೆ.

ಕಳೆದ ಆಗಸ್ಟ್ 5 ರಂದು 370 ಮತ್ತು 35 ಎ ನೇ ವಿಧಿಗಳನ್ನು ರದ್ದುಗೊಳಿಸಿದ ನಂತರ ಕಾರ್ಗಿಲ್‍ ಗೆ ಭೇಟಿ ನೀಡುತ್ತಿರುವ ಕಾಶ್ಮೀರದ ಮುಖ್ಯವಾಹಿನಿಯ ರಾಜಕೀಯ ನಾಯಕರ ನಿಯೋಗ ಇದಾಗಿದೆ. ಕಾರ್ಗಿಲ್‍ನಲ್ಲಿ ಜನರು ಹಿಂದಿನ ರಾಜ್ಯವನ್ನು ವಿಭಜನೆಗೆ ವಿರೋಧಿಸಿದ್ದಾರೆ. ರಾಜ್ಯವನ್ನು ಪುನರ್ ಸ್ಥಾಪನೆಗೆ ಒತ್ತಾಯಿಸಿದ್ದಾರೆ. ಅಲ್ಲದೆ, ಲಡಾಖ್ ಕೇಂದ್ರಾಡಳಿತ ಪ್ರದೇಶದ ಬದಲಿಗೆ ಜಮ್ಮು-ಕಾಶ್ಮೀರದ ಭಾಗವಾಗಿರಲು ಇಚ್ಛಿಸಿದ್ದಾರೆ.

ನಿಯೋಗ ಶುಕ್ರವಾರ ಮುಂಜಾನೆ ಬೇಸಿಗೆ ರಾಜಧಾನಿ ಶ್ರೀನಗರದಿಂದ ಹೊರಟು ಕಾರ್ಗಿಲ್‌ಗೆ ತೆರಳಿದೆ ಎಂದು ಮೂಲಗಳು ತಿಳಿಸಿವೆ. ನಿಯೋಗದ ಸದಸ್ಯರನ್ನು ಬರಮಾಡಿಕೊಳ್ಳಲು ಹೆಚ್ಚಿನ ಸಂಖ್ಯೆಯ ರಾಜಕೀಯ ಮುಖಂಡರು ಮತ್ತು ಕಾರ್ಯಕರ್ತರು ದ್ರಾಸ್‌ಗೆ ಧಾವಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT