ಒಮರ್ ಅಬ್ದುಲ್ಲಾ 
ದೇಶ

ಬಿಜೆಪಿ ಅದರ ಸಿದ್ಧಾಂತದ ವಿರುದ್ಧ ನಮ್ಮ ಹೋರಾಟ: ಒಮರ್ ಅಬ್ದುಲ್ಲಾ

ನಮ್ಮ ಹೋರಾಟ ದೇಶದ ವಿರುದ್ಧ ಅಲ್ಲ, ಬಿಜೆಪಿ ಹಾಗೂ ಅದರ ಸಿದ್ಧಾಂತದ ವಿರುದ್ಧ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಕಾರ್ಗಿಲ್: ನಮ್ಮ ಹೋರಾಟ ದೇಶದ ವಿರುದ್ಧ ಅಲ್ಲ, ಬಿಜೆಪಿ ಹಾಗೂ ಅದರ ಸಿದ್ಧಾಂತದ ವಿರುದ್ಧ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಕಾರ್ಗಿಲ್ ನಲ್ಲಿ ಸ್ಥಳೀಯ ಮುಖಂಡರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಮ್ಮ ದೇಶವಲ್ಲಾ, ಸಂವಿಧಾನದಲ್ಲಿ ಬರೆದಿರುವುದನ್ನು ಮರಳಿ ಪಡೆಯುವ ತನಕ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.

ಒಮರ್ ಅಬ್ದುಲ್ಲಾ ನೇತೃತ್ವದ ಫೀಪಲ್ಸ್  ಅಲೈಯನ್ಸ್  ಇಂದು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ ಮುಖಂಡರನ್ನು ಭೇಟಿ ಮಾಡಿತು. 2019 ಆಗಸ್ಟ್ 5ರ ಹಿಂದೆ ಇದ್ದ ವಿಶೇಷ ಸ್ಥಾನ ಮಾನವನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ನಾವೆಲ್ಲಾ ಒಂದಾಗಿದ್ದೇವೆ ಎಂದು ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಅಬ್ದುಲ್ಲಾ ಹೊರತುಪಡಿಸಿದಂತೆ ಗುಲಾಮ್ ನಬಿ ಲೋನ್ ಹಂಜುರಾ, ನಾಸಿರ್ ಅಸ್ಲಂ ವಾನಿ, ಮುಜಾಫರ್ ಷಾ ಮತ್ತು ವಹೀದ್ ಪರ್ರಾ ಮತ್ತಿತರರು ಈ ನಿಯೋಗದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT