ಪ್ರಧಾನಿ ಮೋದಿ 
ದೇಶ

ಈದ್ ಮಿಲಾದ್: ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್

ಪವಿತ್ರ ಈದ್ ಮಿಲಾದ್ ಹಬ್ಬವನ್ನು ಶುಕ್ರವಾರ ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶದ ಸಮಸ್ಯ ಮುಸ್ಲಿಂ ಬಾಂಧವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ದೇಶದ ವಿವಿಧ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ನವದೆಹಲಿ: ಪವಿತ್ರ ಈದ್ ಮಿಲಾದ್ ಹಬ್ಬವನ್ನು ಶುಕ್ರವಾರ ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶದ ಸಮಸ್ಯ ಮುಸ್ಲಿಂ ಬಾಂಧವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ದೇಶದ ವಿವಿಧ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಮಿಲಾದ್‌–ಉನ್–ನಬಿ ದಿನದ ಶುಭಾಶಯಗಳು. ಈ ದಿನವು ಕರುಣೆ ಮತ್ತು ಸೋದರತ್ವವನ್ನು ಮತ್ತಷ್ಟು ವಿಸ್ತರಿಸಲಿ. ಎಲ್ಲರೂ ಆರೋಗ್ಯದಿಂದ ಮತ್ತು ಖುಷಿಯಿಂದ ಇರಲಿ. ಈದ್‌ ಮುಬಾರಕ್‌! ಎಂದು ಹೇಳಿದ್ದಾರೆ. 

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿ ಎಲ್ಲ ನಾಗರಿಕರಿಗೆ, ವಿಶೇಷವಾಗಿ ಭಾರತದ ಮತ್ತು ಹೊರ ರಾಷ್ಟ್ರಗಳಲ್ಲಿರುವ ನಮ್ಮ ಮುಸ್ಲಿಂ ಸೋದರ ಮತ್ತು ಸೋದರಿಯರಿಗೆ ಶುಭಾಶಯಗಳು. ಸಮಾಜದ ಒಳಿತಿಗಾಗಿ, ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಗಾಗಿ ನಾವೆಲ್ಲರೂ ಅವರ ಬೋಧನೆಗಳನ್ನು ಅನುಸರಿಸೋಣ' ಎಂದು ತಿಳಿಸಿದ್ದಾರೆ. 

ರಾಜನಾಥ್ ಸಿಂಗ್ ಅವರು ಟ್ವೀಟ್ ಮಾಡಿ, ಮಿಲಾದ್‌–ಉನ್–ನಬಿ ದಿನದ ಶುಭಾಶಯಗಳು. ಈ ಹಬ್ಬವು ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಸೌಹಾರ್ದತೆಯ ಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಎಲ್ಲರಿಗೂ ಪ್ರೇರಣೆ ನೀಡಲಿ ಎಂದು ಹೇಳಿದ್ದಾರೆ. 

ಎಲ್ಲರಿಗೂ ಮಿಲಾದ್‌–ಉನ್–ನಬಿ ದಿನದ ಶುಭಾಶಯಗಳು. ಈ ಹಬ್ಬವು ದೇಶಾದ್ಯಂತ ಶಾಂತಿ, ಸಾಮರಸ್ಯ, ಸಹೋದರತೆ ಮತ್ತು ಸಂತೋಷವನ್ನು ತರಲಿ ಎಂದು ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

5 ವರ್ಷದ ಬಾಲಕನ ಜೊತೆ ಅಸ್ವಾಭಾವಿಕ S*x, ವಸತಿ ಶಾಲೆ ವಿದ್ಯಾರ್ಥಿಯ ಗಂಟಲು ಸೀಳಿದ ಗಾರ್ಡ್!

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

SCROLL FOR NEXT