ಜೆಪಿ ನಡ್ಡಾ 
ದೇಶ

ಉಗ್ರರಿಂದ ಹತ್ಯೆಗೀಡಾದ ಕಾಶ್ಮೀರ ಬಿಜೆಪಿ ನಾಯಕರ 'ತ್ಯಾಗ' ವ್ಯರ್ಥವಾಗದು: ಜೆಪಿ ನಡ್ಡಾ

ಕಾಶ್ಮೀರದಲ್ಲಿ ಶಂಕಿತ ಉಗ್ರರಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ "ತ್ಯಾಗ" ವ್ಯರ್ಥವಾಗುವುದಿಲ್ಲ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರತಿಪಾದಿಸಿದ್ದಾರೆ.

ನವದೆಹಲಿ: ಕಾಶ್ಮೀರದಲ್ಲಿ ಶಂಕಿತ ಉಗ್ರರಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ "ತ್ಯಾಗ" ವ್ಯರ್ಥವಾಗುವುದಿಲ್ಲ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ  ಪ್ರತಿಪಾದಿಸಿದ್ದಾರೆ.

ಇಡೀ ಸಮಾಜವು ದುಃಖಿತ ಕುಟುಂಬಗಳೊಂದಿಗೆ ಇದೆ ಮತ್ತು ಅವರ ತ್ಯಾಗವು ವ್ಯರ್ಥವಾಗುವುದಿಲ್ಲ ಎಂದು ನಡ್ಡಾ ತಮ್ಮ ಅಧಿಕೃತ ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.

ಅಂತಹ ರಾಷ್ಟ್ರೀಯವಾದಿಗಳನ್ನು ಕಳೆದುಕೊಳ್ಳುವುದು ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದು ಜೆ.ಪಿ. ನಡ್ಡಾ ಹೇಳಿದ್ದಾರೆ.

ಕುಲ್ಗಾಮ್ ಜಿಲ್ಲೆಯ ವೈ ಕೆ ಪೊರಾ ಪ್ರದೇಶದಲ್ಲಿ ಉಗ್ರಗಾಮಿಗಳಿಂದ ಫಿಡಾ ಹುಸೇನ್, ಉಮರ್ ಹಜಮ್ ಮತ್ತು ಉಮರ್ ರಶೀದ್ ಬೈಗ್ ಗುಂಡಿನ ದಾಳಿಗೆ ಸಿಕ್ಕಿ ಬಲಿಯಾಗಿದ್ದರು

ಕಳೆದ ಜೂನ್ ತಿಂಗಳಿನಿಂದ ಉಗ್ರರು ಕಣಿವೆ ಪ್ರದೇಶದಲ್ಲಿ ಕಾರ್ಯಕರ್ತರು ಮತ್ತು ನಾಯಕರ ಮೇಲೆ ಗುರಿಯಾಗಿಟ್ಟುಕೊಂಡು ದಾಳಿ ಮಾಡುತ್ತಲೇ ಬಂದಿದ್ದಾರೆ. ಇದುವರೆಗೆ 8 ಮಂದಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT