ಪಪ್ಪು ಯಾದವ್ 
ದೇಶ

ಚುನಾವಣಾ ಪ್ರಚಾರದ ವೇಳೆ ವೇದಿಕೆ ಕುಸಿತ: ಪಪ್ಪು ಯಾದವ್‌ ಗೆ ಬಲಗೈ ಮುರಿತ

ಜನ ಅಧಿಕಾರಿ ಪಕ್ಷದ(ಜೆಎಪಿ) ಸ್ಥಾಪಕರಲ್ಲೊಬ್ಬರಾದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರು  ಜಿಲ್ಲೆಯ ಮೀನಾಪುರ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ವೇದಿಕೆಯಿಂದ ಕುಸಿದುಬಿದ್ದು, ಬಲಗೈ ಮುರಿತವಾಗಿದೆ.

ಮುಜಾಫರ್ ಪುರ್‍: ಜನ ಅಧಿಕಾರಿ ಪಕ್ಷದ(ಜೆಎಪಿ) ಸ್ಥಾಪಕರಲ್ಲೊಬ್ಬರಾದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರು  ಜಿಲ್ಲೆಯ ಮೀನಾಪುರ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ವೇದಿಕೆಯಿಂದ ಕುಸಿದುಬಿದ್ದು, ಬಲಗೈ ಮುರಿತವಾಗಿದೆ.

ಪಪ್ಪು ಯಾದವ್ ಅವರು ಮಿನಾಪುರ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ವೇದಿಕೆ ಇದ್ದಕ್ಕಿದ್ದಂತೆ ಕುಸಿದಿದೆ. ವೇದಿಕೆಯಲ್ಲಿ ಅಧಿಕ ಸಂಖ್ಯೆಯ ಕಾರ್ಯಕರ್ತರು ಇದ್ದದ್ದರಿಂದ ದುರಂತ ಸಂಭವಿಸಿದೆ. ಘಟನೆಯಲ್ಲಿ ತಮ್ಮ ಬಲಗೈ ಮುರಿತಗೊಂಡಿದೆ ಎಂದು ಯಾದವ್ ತಾವಾಗಿಯೇ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಘಟನೆ ನಡೆದಿರುವುದಕ್ಕೆ ಯಾದವ್ ಆಡಳಿತವನ್ನು ದೂಷಿಸಿದ್ದಾರೆ. ತಮ್ಮ ಭಾಷಣ ಕೇಳಲು ಸಭಿಕರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿಲ್ಲ ಎಂದು ಅವರು ದೂರಿದ್ದಾರೆ. ಸದ್ಯದ  ಆಡಳಿತದಿಂದ ಜನರು ಬೇಸರಗೊಂಡಿದ್ದು, ನಿತೀಶ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಲು ಜನರು ಮನಸ್ಸು ಮಾಡಿದ್ದಾರೆ ಎಂದು ಪಪ್ಪು ಯಾದವ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

7ನೇ ದಿನಕ್ಕೆ ಕಾಲಿಟ್ಟ ಇಂಡಿಗೋ ಬಿಕ್ಕಟ್ಟು; ಬೆಂಗಳೂರಿನಲ್ಲಿ 127 ವಿಮಾನ ರದ್ದು; ಮುಂಬೈ, ದೆಹಲಿಯಲ್ಲೂ ಇದೆ ಕಥೆ!

ವಂದೇ ಮಾತರಂ 150ನೇ ವಾರ್ಷಿಕೋತ್ಸವ: ಲೋಕಸಭೆಯಲ್ಲಿಂದು ಚರ್ಚೆ, ಎಲ್ಲರ ಚಿತ್ತ ಪ್ರಧಾನಿ ಮೋದಿಯತ್ತ

ಕರ್ನಾಟಕದ 2.5 ಲಕ್ಷ ಹುದ್ದೆಗಳು ಖಾಲಿ: ಹಣಕಾಸಿನ ಒತ್ತಡ, ಕಾನೂನು ಅಡೆತಡೆಗಳು.. ಹೆಚ್ಚುತ್ತಿರುವ ಯುವಜನರ ಕೋಪ!

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರ-ವಿಪಕ್ಷಗಳ ನಡುವೆ ಜಟಾಪಟಿ ಸಾಧ್ಯತೆ, ಅವಿಶ್ವಾಸ ನಿರ್ಣಯ ಮಂಡಿಸಲು BJP ಮುಂದು..!

ಪರಪ್ಪನ ಅಗ್ರಹಾರ: ಸಹ ಕೈದಿಗೆ ನಟ ದರ್ಶನ್ ಕಿರುಕುಳ?, ಸೆಲ್ ಬಳಿ ಕಟ್ಟೆಚ್ಚರ!: ವರದಿ

SCROLL FOR NEXT