ಸಂಗ್ರಹ ಚಿತ್ರ 
ದೇಶ

ಲಸಿಕೆ ಭರವಸೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗದು: ಆಯೋಗ ಕೊಟ್ಟ ಕಾರಣ ಹೀಗಿದೆ...

ಬಿಹಾರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ಲಸಿಕೆ ಭರವಸೆ ನೀಡಿರುವುದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. 

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ಲಸಿಕೆ ಭರವಸೆ ನೀಡಿರುವುದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. 

ಆರ್ ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಅವರ ಊರಿಗೆ ಪ್ರತಿಕ್ರಿಯೆ ನೀಡಿರುವ ಚುನಾವಣಾ ಆಯೋಗ, ಲಸಿಕೆ ಭರವಸೆಯ ವಿಷಯದಲ್ಲಿ  ಈ ರೀತಿ ಹೇಳಿದೆ. 

ಈ ಭರವಸೆ ತಾರತಮ್ಯದಿಂದ ಕೂಡಿದೆ ಹಾಗೂ ಕೇಂದ್ರ ಸರ್ಕಾರದ ಅಧಿಕಾರದ ದುರ್ಬಳಕೆ ಎಂದು ಗೋಖಲೆಯವರು ಹೇಳಿದ್ದರು. 
 
ಈ ಸಂಬಂಧ ಕೆಲವು ಮಾರ್ಗಸೂಚಿಗಳನ್ನು ಉಲ್ಲೇಖಿಸಿರುವ ಚುನಾವಣಾ ಆಯೋಗ, ಸಂವಿಧಾನದ ಮೂಲಕ ಸ್ಥಾಪಿತವಾಗಿರುವ ರಾಜ್ಯ ನೀತಿಯಲ್ಲಿನ ನಿರ್ದೇಶನ ತತ್ವಗಳು, ಸರ್ಕಾರ ಅಥವಾ ಆಡಳಿತಕ್ಕೆ ಪ್ರಜೆಗಳಿಗಾಗಿ ಹಲವು ವಿಧಗಳ ಜನಕಲ್ಯಾಣ ಕ್ರಮಗಳನ್ನು ಜಾರಿಗೊಳಿಸುವುದಕ್ಕೆ ಆದೇಶಿಸುತ್ತದೆ. ಆದ್ದರಿಂದ ಈ ರೀತಿಯ ಜನಕಲ್ಯಾಣ ಯೋಜನೆಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಈ ರೀತಿಯ ಭರವಸೆ ನೀಡುವುದು ನೀತಿ ಸಂಹಿತೆಯ ಉಲ್ಲಂಘನೆಯಾಗುವುದಿಲ್ಲ ಎಂದು ಆಯೋಗ ತಿಳಿಸಿದೆ. 

ಜಾರಿಗೆ ತರಲು ಸಾಧ್ಯವಿರುವ ಯೋಜನೆಗಳ ಮೂಲಕವಷ್ಟೇ ಮತದಾರರ ವಿಶ್ವಾಸವನ್ನು ಬೇಡುವುದಕ್ಕೆ ಸಾಧ್ಯವಿದೆ ಎಂದು ಮತ್ತೊಂದು ಉಲ್ಲೇಖದಲ್ಲಿ ಆಯೋಗ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT