ಆರ್. ದೊರೈಕಣ್ಣು 
ದೇಶ

ಕೋವಿಡ್-19 ವೈರಸ್ ಗೆ ಬಲಿಯಾದ ತಮಿಳುನಾಡು ಕೃಷಿ ಸಚಿವ ಆರ್ . ದೊರೈಕ್ಕಣ್ಣು

ತಮಿಳುನಾಡು  ಕೃಷಿ ಸಚಿವ ಆರ್. ದೊರೈಕಣ್ಣು ಕೋವಿಡ್-19 ವೈರಸ್ ಗೆ ಬಲಿಯಾಗಿದ್ದಾರೆ. 72 ವರ್ಷದ ಆರ್.ದೊರೈಕಣ್ಣು ತೀವ್ರ ಉಸಿರಾಟದ ತೊಂದರೆ ಹಾಗೂ ಕೋವಿಡ್-19 ಪಾಸಿಟಿವ್ ಕಾರಣ ಅಕ್ಟೋಬರ್ 13 ರಂದು ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು.

ಚೆನ್ನೈ: ತಮಿಳುನಾಡು  ಕೃಷಿ ಸಚಿವ ಆರ್. ದೊರೈಕಣ್ಣು ಕೋವಿಡ್-19 ವೈರಸ್ ಗೆ ಬಲಿಯಾಗಿದ್ದಾರೆ. 72 ವರ್ಷದ ಆರ್.ದೊರೈಕಣ್ಣು ತೀವ್ರ ಉಸಿರಾಟದ ತೊಂದರೆ ಹಾಗೂ ಕೋವಿಡ್-19 ಪಾಸಿಟಿವ್ ಕಾರಣ ಅಕ್ಟೋಬರ್ 13 ರಂದು ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು.

ಸಚಿವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿರುವುದಾಗಿ ಆಸ್ಪತ್ರೆ ಶನಿವಾರ ಮಧ್ಯಾಹ್ನ ಬಿಡುಗಡೆ ಮಾಡಿದ್ದ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿತ್ತು. ಗರಿಷ್ಠ  ಜೀವ ರಕ್ಷಕದ ಹೊರತಾಗಿಯೂ ಅವರ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿರುವುದಾಗಿ  ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಅರವಿಂದನ್ ಸೆಲ್ವರಾಜ್ ಪ್ರಕಟಣೆಯಲ್ಲಿ  ತಿಳಿಸಿದ್ದರು.

ಸಿಟಿ ಸ್ಕ್ಯಾನ್ ನಲ್ಲಿ ಅವರ ಶೇ. 90 ರಷ್ಟು ಶ್ವಾಸಕೋಶಗಳು ಹಾಳಾಗಿರುವುದಾಗಿ ಅಕ್ಟೋಬರ್ 25 ರಂದು ಆಸ್ಪತ್ರೆ ತಿಳಿಸಿತ್ತು. ಅಂದೇ ಮುಖ್ಯಮಂತ್ರಿ ಪಳನಿಸ್ವಾಮಿ, ರಾಜ್ಯ ಸಚಿವ ಡಿ. ಜಯಕುಮಾರ್ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿ ಆರ್. ದೊರೈಕಣ್ಣು ಅವರ ಆರೋಗ್ಯ ವಿಚಾರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ರಷ್ಯಾದ ತೈಲ ಖರೀದಿಯನ್ನು ಭಾರತ ತಕ್ಷಣ ನಿಲ್ಲಿಸಲೇಬೇಕು, ಇಲ್ಲದಿದ್ದರೆ...: ಮತ್ತೆ ಬೆದರಿಕೆ ಹಾಕಿದ ಅಮೆರಿಕ ಸಚಿವ ಲುಟ್ನಿಕ್!

ಸಾಹಸಸಿಂಹ ವಿಷ್ಣುವರ್ಧನ್, ಸರೋಜಾದೇವಿಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ಘೋಷಣೆ

ಹದಗೆಟ್ಟ ಆರ್ಥಿಕ ಸ್ಥಿತಿ; ಸ್ಮಾರ್ಟ್ ಫೋನ್ ಕೊಡಿಸಲು ಒಪ್ಪದ ತಾಯಿ; 12 ವರ್ಷದ ಬಾಲಕ ಆತ್ಮಹತ್ಯೆ!

ಟ್ರಂಪ್ ಮಿತ್ರ ಚಾರ್ಲಿ ಕಿರ್ಕ್ ಹತ್ಯೆಗೆ ಬಳಸಿದ್ದ ರೈಫಲ್ ಪತ್ತೆ-ಎಫ್‌ಬಿಐ; 'ಕಾಲೇಜು ವಯಸ್ಸಿನ ಯುವಕನಿಂದ ಕೃತ್ಯ!

Manipur: ಪ್ರಧಾನಿ ಮೋದಿ ಮಣಿಪುರ ಭೇಟಿಗೂ ಮುನ್ನ ಬಿಜೆಪಿ ಸದಸ್ಯರ ಸಾಮೂಹಿಕ ರಾಜೀನಾಮೆ! ಕಾರಣವೇನು?

SCROLL FOR NEXT