ಸಂಜಯ್ ರಾವತ್, ತೇಜಸ್ವಿ ಯಾದವ್ 
ದೇಶ

ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿಯಾದರೂ ಆಶ್ಚರ್ಯಪಡಬೇಕಾಗಿಲ್ಲ- ಸಂಜಯ್ ರಾವತ್ 

ಆರ್ ಜೆಡಿ ಯುವ ಮುಖಂಡ ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿಯಾದರೂ ಆಶ್ಚರ್ಯಪಡಬೇಕಾಗಿಲ್ಲ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

ಪುಣೆ: ಆರ್ ಜೆಡಿ ಯುವ ಮುಖಂಡ ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿಯಾದರೂ ಆಶ್ಚರ್ಯಪಡಬೇಕಾಗಿಲ್ಲ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಬಿಹಾರದಲ್ಲಿ ಚುನಾವಣೆಯನ್ನು ನಾವು ಗಮನಿಸಿದರೆ ಯಂಗ್ ಸ್ಟಾರ್ ತೇಜಸ್ವಿ ಯಾದವ್ ಗೆ ಯಾರೂ ಕೂಡಾ ಬೆಂಬಲ ನೀಡುತ್ತಿಲ್ಲ. ಸಿಬಿಐ  ಹಾಗೂ ಆದಾಯ ತೆರಿಗೆ ಇಲಾಖೆ ಅವರ ಹಿಂದೆ ಬಿದಿದ್ದು, ಲಾಲೂ ಪ್ರಸಾದ್ ಯಾದವ್ ಜೈಲಿನಲ್ಲಿದ್ದಾರೆ. ಆದರೂ ಕೂಡಾ ಇತರ ಪಕ್ಷಗಳಿಗೆ ಸವಾಲು ಸೃಷ್ಟಿಸಿದ್ದಾರೆ. ನಾಳೆ ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿಯಾದರೂ ಅಶ್ಚರ್ಯವಿಲ್ಲಾ, ಏಕೆಂದರೆ ಇದು ಸಾರ್ವಜನಿಕ ಭಾವನೆಯಾಗಿದೆ ಎಂದರು.

ಬಿಹಾರದಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಕೋವಿಡ್-19 ಲಸಿಕೆ ಭರವಸೆ ಬಗ್ಗೆ ಚುನಾವಣಾ ಆಯೋಗದ ಅನುಮತಿ ಕುರಿತು ಪ್ರತಿಕ್ರಿಯಿಸಿದ ಸಂಜಯ್ ರಾವತ್, ಚುನಾವಣಾ ಆಯೋಗ ಈಗ ಬಿಜೆಪಿಯ ಶಾಖೆಯಾಗಿದೆ. ಅದರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಇದು ಸ್ಪಷ್ಟ ಉಲ್ಲಂಘನೆ ಎಂದು ನಂಬುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಧರ್ಮಸ್ಥಳ ಪ್ರಕರಣ: ಅಗತ್ಯವಿದ್ದರೆ ಚಿನ್ನಯ್ಯ ಕುಟುಂಬಕ್ಕೆ ರಕ್ಷಣೆ ನೀಡಲಾಗುವುದು - ಪರಮೇಶ್ವರ

ಧರ್ಮಸ್ಥಳ ಪ್ರಕರಣ: ದಕ್ಷಿಣ ಕನ್ನಡದಿಂದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು!

'ತೆಗ್ದು ತಿ**** ಇಟ್ಕೋ..': ಪಾಕ್ ವೇಗಿ Haris Rauf ವಿವಾದಿತ ಸನ್ಹೆಗೆ ಮುಟ್ಟಿ ನೋಡಿಕೊಳ್ಳುವ ತಿರುಗೇಟು ಕೊಟ್ಟ Arshdeep Singh

"ಚೀನಾದಿಂದ ಸರ್ಕಾರ ಕೆಡವಲು ಯತ್ನ; ಪರಿಸ್ಥಿತಿ ಕೈಮೀರುವ ಮುನ್ನ ಭಾರತ ಎಚ್ಚೆತ್ತುಕೊಳ್ಳಬೇಕು"

Biggboss ಸ್ಪರ್ಧಿ Rithu Video Leaked: ನನ್ನ ಗಂಡನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ; ವಿಡಿಯೋ ಹರಿಬಿಟ್ಟ ನಟ ಧರ್ಮ ಪತ್ನಿ!

SCROLL FOR NEXT