ಬಾಬ್ರಿ ಮಸೀದಿ 
ದೇಶ

ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣ: ಸೆಪ್ಟೆಂಬರ್ ಅಂತ್ಯಕ್ಕೆ ತೀರ್ಪು?

ತೀವ್ರ ಕುತೂಹಲ ಕೆರಳಿಸಿದ್ದ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಇದೇ ಸೆಪ್ಟೆಂಬರ್ ಅಂತ್ಯಕ್ಕೆ ತೀರ್ಪು ಘೋಷಣೆಯಾಗುವ ಸಾಧ್ಯತೆ ಇದೆ.

ಲಖನೌ: ತೀವ್ರ ಕುತೂಹಲ ಕೆರಳಿಸಿದ್ದ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಇದೇ ಸೆಪ್ಟೆಂಬರ್ ಅಂತ್ಯಕ್ಕೆ ತೀರ್ಪು ಘೋಷಣೆಯಾಗುವ ಸಾಧ್ಯತೆ ಇದೆ.

ಬಿಜೆಪಿಯ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿದಂತೆ 32 ಆರೋಪಿಗಳ ಪರ-ವಿರುದ್ಧ ವಕೀಲರು ತಮ್ಮ ವಾದ ಮಂಡಿಸಿದ್ದು, ವಿಚಾರಣೆ ಪ್ರಕ್ರಿಯೆಯು ಮಂಗಳವಾರ ಪೂರ್ಣಗೊಂಡಿದೆ. ವಿಚಾರಣೆ ಬಳಿಕ ಬುಧವಾರದಿಂದ ತೀರ್ಪು ಬರೆಸುವಿಕೆ ಆರಂಭಿಸುವುದಾಗಿ  ನ್ಯಾಯಾಧೀಶರಾದ ಎಸ್‌.ಕೆ.ಯಾದವ್‌ ತಿಳಿಸಿದ್ದಾರೆ. 

ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌, ಬಿಜೆಪಿ ನಾಯಕರಾದ ಮುರಳಿ ಮನೋಹರ್‌ ಜೋಶಿ, ಉಮಾ ಭಾರತಿ ಸೇರಿದಂತೆ ಹಲವರು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಪ್ರಕರಣ ಸಂಬಂಧ ಸಿಬಿಐ ಆರೋಪಿಗಳ  ವಿರುದ್ಧ 350 ಸಾಕ್ಷಿಗಳನ್ನು ಹಾಗೂ 600 ದಾಖಲೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ ವಿಧಿಸಿರುವ ಗಡುವನ್ನು ಗಮನದಲ್ಲಿರಿಸಿಕೊಂಡು, ತಿಂಗಳಾಂತ್ಯದ ಒಳಗೇ ಪ್ರಕರಣದ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ನಿಂದ ಇರಾನ್ ಗುಪ್ತಚರ ಇಲಾಖೆ ಮುಖ್ಯಸ್ಥರ ಹತ್ಯೆ?; ಇದರಿಂದೆಲ್ಲಾ ನಾಯಕತ್ವಕ್ಕೆ ಮಾರಕ ಹೊಡೆತ ಬೀಳಲ್ಲ- ಇರಾನ್

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸೀಟ್ ಚಾರ್ಜ್‌ಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ, ಇನ್ನು ಮುಂದೆ ಶೇ.60ರಷ್ಟು ಸೀಟುಗಳು ಉಚಿತ..!

ಪರಿಷತ್ತಿನಲ್ಲೂ ಜಾಹೀರಾತು ಶುಲ್ಕ ವಿಧಿಸುವ, ಪೊಲೀಸ್ ವರ್ಗಾವಣೆಗೆ ಸಂಬಂಧಿಸಿದ ಮಸೂದೆಗಳ ಅಂಗೀಕಾರ

ಅಸ್ಸಾಂನಲ್ಲಿ ಕಾಂಗ್ರೆಸ್ ಗೆ ಭಾರಿ ಹೊಡೆತ: ಹಿರಿಯ ನಾಯಕ ಪ್ರದ್ಯುತ್ ಬೊರ್ಡೊಲೊಯಿ ಬಿಜೆಪಿಗೆ ಸೇರ್ಪಡೆ!

'ರಾಜಕೀಯದಲ್ಲಿ ಪೂರ್ಣವಿರಾಮ ಇಲ್ಲ': 59 ರಾಜ್ಯಸಭಾ ಸದಸ್ಯರಿಗೆ ಬೀಳ್ಕೊಡುಗೆ; ಖರ್ಗೆ, ದೇವೇಗೌಡರನ್ನು ಶ್ಲಾಘಿಸಿದ ಮೋದಿ

SCROLL FOR NEXT