ಪ್ರಣಬ್ ಮುಖರ್ಜಿ 
ದೇಶ

'ರಾಷ್ಟ್ರಪತಿಗಳೊಂದಿಗೆ ಮಾತಾಡುತ್ತಿದ್ದೇನೆ ಎಂಬುದನ್ನೇ ಪ್ರಣಬ್ ಮುಖರ್ಜಿ ಮರೆಸುತ್ತಿದ್ದರು'

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಆರ್‌ಎಸ್‌ಎಸ್‌ ಮುಖ್ಯಸ್ಥ ಡಾ. ಮೋಹನ್ ಭಾಗವತ್, ಪ್ರಣಬ್ ಅವರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿದ್ದಾರೆ.

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಆರ್‌ಎಸ್‌ಎಸ್‌ ಮುಖ್ಯಸ್ಥ ಡಾ. ಮೋಹನ್ ಭಾಗವತ್, ಪ್ರಣಬ್ ಅವರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿದ್ದಾರೆ.

ಪ್ರಣಬ್ ನಿಧನದಿಂದಾಗಿ ಭಾರತದ ರಾಜಕೀಯ ಕ್ಷೇತ್ರದಲ್ಲಿ ಶೂನ್ಯ ಭಾವನೆ ಆವರಿಸಿದೆ ಎಂದಿರುವ ಮೋಹನ್ ಭಾಗವತ್, ಅವರ ವ್ಯಕ್ತಿತ್ವವೇ ನಮಗೆಲ್ಲಾ ಮಾರ್ಗದರ್ಶನ ಮಾಡುತ್ತಿತ್ತು ಎಂದು ಹೇಳಿದ್ದಾರೆ.

ಪ್ರಣಬ್ ಅತ್ಯಂತ ಸೌಮ್ಯ ಸ್ವಭಾವದ ಆತ್ಮೀಯ ವ್ಯಕ್ತಿತ್ವವನ್ನು ಹೊಂದಿದ್ದರು ಎಂದು ಹೇಳಿರುವ ಮೋಹನ್ ಭಾಗವತ್, ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿರಿಸಿ ಅವರು ನಮ್ಮನ್ನು ಭೇಟಿ ಮಾಡುತ್ತಿದ್ದ ರೀತಿ ಅನನ್ಯ ಎಂದು ಹೇಳಿದ್ದಾರೆ.

ಪ್ರಣಬ್ ಮುಖರ್ಜಿ ತಮ್ಮನ್ನು ಅದೆಷ್ಟು ಆತ್ಮೀಯವಾಗಿ ಮಾತನಾಡಿಸುತ್ತಿದ್ದರು ಎಂದರೆ, ತಾವು ರಾಷ್ಟ್ರಪತಿಗಳೊಂದಿಗೆ ಮಾತನಾಡುತ್ತಿರುವುದನ್ನೇ ಅವರು ಮರೆಸಿ ಬಿಡುತ್ತಿದ್ದರು ಎಂದು ಭಾಗವತ್ ತಮ್ಮ ಒಡನಾಟವನ್ನು ಸ್ಮರಿಸಿದ್ದಾರೆ.

ಪ್ರಣಬ್ ಅವರನ್ನು ಭೇಟಿಯಾದಾಗಲೆಲ್ಲಾ ಅವರೊಟ್ಟಿಗೆ ಮಾತನಾಡಲು ಹಲವು ವಿಷಯಗಳಿರುತ್ತಿದ್ದವು. ಮಾತನಾಡುತ್ತಾ ಮಾತನಾಡುತ್ತಾ ನಾವು ಅದೆಷ್ಟು ಆತ್ಮೀಯರಾಗಿ ಬಿಡುತ್ತಿದ್ದೇವು ಎಂದರೆ ಅವರು ರಾಷ್ಟ್ರಪತಿಗಳು ಎಂಬುದೇ ನನಗೆ ಮರೆತು ಹೋಗುತ್ತಿತ್ತು ಎಂದು ಭಾಗವತ್ ವಿವರಿಸಿದ್ದಾರೆ.

ಯಾವುದೇ ರಾಜಕೀಯ ಪಕ್ಷಗಳ ಜೊತೆ ಅವರು ಎಂದು ರಾಜಕೀಯ ಅಸ್ಪೃಶ್ಯತೆ ತೋರಿರಲಿಲ್ಲ, ಎಲ್ಲಾ ಪಕ್ಷಗಳನ್ನು ಪ್ರಣಬ್ ಮಖರ್ಜಿ ಗೌರವಿಸುತ್ತಿದ್ದರು.  ಆರ್ ಎಸ್ ಎಸ್ ಪರಿವಾರದ ಮಾರ್ಗ ದರ್ಶಕರಾಗಿದ್ದರು ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT