ಇಂಡೊ-ಟಿಬೆಟ್ ಪೊಲೀಸರು 
ದೇಶ

ಪೂರ್ವ ಲಡಾಕ್ ಉದ್ವಿಗ್ನ ಸ್ಥಿತಿ: ನೇಪಾಳ ಗಡಿಯಲ್ಲಿ ವಿಶೇಷ ಭದ್ರತೆಯಿಂದ ಇರಲು ಕೇಂದ್ರ ಗೃಹ ಸಚಿವಾಲಯ ಸೂಚನೆ

ಗಡಿ ವಾಸ್ತವ ರೇಖೆ(ಎಲ್ ಎಸಿ)ಯುದ್ಧಕ್ಕೂ ಚೀನಾ ಸೇನೆಯ ನಿಲುಗಡೆಯಿಂದ ಉದ್ವಿಗ್ನ ಸ್ಥಿತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಗಡಿಭಾಗದಲ್ಲಿರುವ ಎಲ್ಲಾ ಅರೆ ಸೇನಾಪಡೆಯನ್ನು ವಿಶೇಷ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ನವದೆಹಲಿ: ಗಡಿ ವಾಸ್ತವ ರೇಖೆ(ಎಲ್ ಎಸಿ)ಯುದ್ಧಕ್ಕೂ ಚೀನಾ ಸೇನೆಯ ನಿಲುಗಡೆಯಿಂದ ಉದ್ವಿಗ್ನ ಸ್ಥಿತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಗಡಿಭಾಗದಲ್ಲಿರುವ ಎಲ್ಲಾ ಅರೆ ಸೇನಾಪಡೆಯನ್ನು ವಿಶೇಷ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ಭಾರತ-ನೇಪಾಳ ಗಡಿ ಭಾಗದಲ್ಲಿ, ಉತ್ತರಾಖಂಡ್ ಮತ್ತು ಸಿಕ್ಕಿಮ್ ನ ಮೂರು ದೇಶಗಳ ಗಡಿ ಪ್ರದೇಶ ಸಂಧಿಸುವ ಜಾಗದಲ್ಲಿ ಚೀನಾ ತನ್ನ ಪ್ರಭಾವ ಬಳಸಿಕೊಂಡು ಭಾರತದ ಗಡಿಯೊಳಗೆ ನುಗ್ಗಿ ತೊಂದರೆ ಉಂಟುಮಾಡಬಹುದು ಎಂಬ ಸಂಶಯದಿಂದ ಅರೆ ಸೇನಾಪಡೆಗೆ ವಿಶೇಷ ಮುನ್ನೆಚ್ಚರಿಕೆ ವಹಿಸುವಂತೆ ಗೃಹ ಸಚಿವಾಲಯ ಸೇನೆಗೆ ಸೂಚನೆ ನೀಡಿದೆ.

ಈ ಪ್ರದೇಶಗಳಲ್ಲಿ ಕೆಲ ಭಾಗಗಳಲ್ಲಿ ಭದ್ರತಾ ಪಡೆಯ ನಿಯೋಜನೆ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಗಡಿ ಭಾಗಗಳಲ್ಲಿ ಚೀನಾ ಸೇನೆ ನುಗ್ಗಿ ತೊಂದರೆ ನೀಡಬಹುದಾದ ಪ್ರದೇಶಗಳ ಬಗ್ಗೆ ಗುಪ್ತಚರ ಇಲಾಖೆ ಕೂಡ ಸಶಸ್ತ್ರ ಸೀಮಾ ಬಲ(ಎಸ್ಎಸ್ ಬಿ) ಮತ್ತು ಇಂಡೊ-ಟಿಬೆಟ್ ಗಡಿ ಪೊಲೀಸ್(ಐಟಿಬಿಪಿ)ಯೊಂದಿಗೆ ಮಾಹಿತಿ ಹಂಚಿಕೊಂಡಿದೆ.

ಸಿಕ್ಕಿಮ್ ಮೂರು ಜಂಕ್ಷನ್ ಪ್ರದೇಶ ಅಂದರೆ ಇಲ್ಲಿ ಭಾರತ, ಚೀನಾ ಮತ್ತು ಟಿಬೆಟ್ ನ ಗಡಿಗಳು ಸಂಧಿಸುವ ಸ್ಥಳ ಬಹಳ ಮುಖ್ಯವಾದದ್ದಾಗಿದೆ. ಡೊಕ್ಲಮ್ ನ ದಕ್ಷಿಣ ಭಾಗದಲ್ಲಿ ಈ ಪ್ರದೇಶವಿದ್ದು ಇಲ್ಲಿಯೇ 2017ರಲ್ಲಿ ಭಾರತ ಮತ್ತು ಚೀನಾ ದೇಶಗಳ ಸೇನೆಗಳು ದೀರ್ಘ ಕಾಲ ಸಂಘರ್ಷ ನಡೆಸಿದ್ದವು.

ಲಡಾಕ್ ನ ಚುಶುಲ್ ಪ್ರದೇಶ ಅತ್ಯಂತ ಅಪಾಯಕಾರಿಯಾಗಿದ್ದು ಈ ಪ್ರದೇಶದಲ್ಲಿ ಯಾವುದೇ ಕ್ಷಣದಲ್ಲಿಯಾದರೂ ಚೀನಾ ದಾಳಿ ನಡೆಸುವ ಸಾಧ್ಯತೆಯಿದೆ. ಹೀಗಾಗಿ ವಿಶೇಷ ಮುನ್ನೆಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಉತ್ತರಾಖಂಡ್ ನ ಕಾಲಪಾಣಿ ಪ್ರದೇಶದಲ್ಲಿ ಗಡಿ ಗಸ್ತು ತಂಡಕ್ಕೆ ವಿಶೇಷ ಎಚ್ಚರಿಕೆಯಿಂದ ಇರುವಂತೆ, ಭಾರತ-ಚೀನಾ ಗಡಿಯಲ್ಲಿ ಐಟಿಬಿಪಿಗೆ, ಎಸ್ ಎಸ್ ಬಿ ಪಡೆಗಳಿಗೆ ಭಾರತ-ನೇಪಾಳ ಮತ್ತು ಭೂತಾನ್ ಗಡಿಯಲ್ಲಿ ಎಚ್ಚರಿಕೆಯನ್ನು ಹೆಚ್ಚಿಸುವಂತೆ ಕೇಂದ್ರ ಗೃಹ ಇಲಾಖೆ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

SCROLL FOR NEXT