ಶಾರ್ಜೀಲ್ ಇಮಾಮ್ 
ದೇಶ

ದೆಹಲಿ ಗಲಭೆ: ಶಾರ್ಜೀಲ್ ಇಮಾಮ್ ಗೆ 14 ದಿನ ನ್ಯಾಯಾಂಗ ಬಂಧನ

ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರನ್ನು ದೆಹಲಿ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಗುರುವಾರ ಆದೇಶ ನೀಡಿದೆ.

ನವದೆಹಲಿ: ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರನ್ನು ದೆಹಲಿ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಗುರುವಾರ ಆದೇಶ ನೀಡಿದೆ.

ಕಳೆದ ಫೆಬ್ರವರಿಯಲ್ಲಿ ಉತ್ತರ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮಾಮ್ ಅವರನ್ನು ಬಂಧಿಸಲಾಗಿತ್ತು. ಆರೋಪಿಯ  ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಯಿತು.

ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು, ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಇಮಾಮ್ ಪರ ವಕೀಲ ಅಹಮ್ಮದ್ ಇಬ್ರಾಹಿಂ ಅವರು ತಿಳಿಸಿದ್ದಾರೆ.


ಪೌರತ್ವ ತಿದ್ದುಪಡಿ ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಪ್ರಚೋದನಾಕಾರಿ ಹಾಗೂ ದೇಶದ್ರೋಹ ಹೇಳಿಕೆ ಆರೋಪದ ಮೇರೆಗೆ ಆಗಸ್ಟ್ 25 ರಂದು ಬಿಹಾರದ ಜಿಹಾನಬಾದ್ ಜಿಲ್ಲೆಯ ಕಾಕೊ ಬಳಿ ಇಮಾಮ್ ಅವರನ್ನು ಬಂಧಿಸಲಾಗಿತ್ತು. ನಂತರ ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT