ಜನರಲ್ ಎಂ ಎಂ ನಾರವಾನೆ 
ದೇಶ

ಲಡಾಕ್ ಗಡಿ ಸಂಘರ್ಷ:ಎರಡು ದಿನಗಳ ಲೇಹ್ ಭೇಟಿ ಕೈಗೊಂಡ ಸೇನಾ ಮುಖ್ಯಸ್ಥ ಜ.ಎಂ.ಎಂ.ನಾರವಾಣೆ

ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಗುರುವಾರ ಲಡಾಕ್ ನ ಅತಿದೊಡ್ಡ ನಗರ ಲೇಹ್ ತಲುಪಿದ್ದಾರೆ.

ಲೇಹ್(ಲಡಾಕ್):ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಗುರುವಾರ ಲಡಾಕ್ ನ ಅತಿದೊಡ್ಡ ನಗರ ಲೇಹ್ ತಲುಪಿದ್ದಾರೆ. ಭಾರತ-ಚೀನಾ ಮಧ್ಯೆ ಪೂರ್ವ ಲಡಾಕ್ ನ ಗಡಿ ವಾಸ್ತವ ರೇಖೆ ಬಳಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಬಗ್ಗೆ, ಅಲ್ಲಿನ ಸ್ಥಿತಿಗತಿ ಬಗ್ಗೆ ಪರಾಮರ್ಶೆ ನಡೆಸಲು ಸೇನಾ ಮುಖ್ಯಸ್ಥರು ಲೇಹ್ ಗೆ ತೆರಳಿದ್ದಾರೆ.

ಗಡಿಯಲ್ಲಿ ಮತ್ತೆ ಉಲ್ಭಣಗೊಂಡಿರುವ ಸ್ಥಿತಿಗತಿ ಬಗ್ಗೆ ಅವರಿಗೆ ಹಿರಿಯ ಕಮಾಂಡರ್ ಗಳು ವಿವರಿಸಲಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಸೇನಾ ಮುಖ್ಯಸ್ಥರು ಎರಡು ದಿನಗಳ ಭೇಟಿಯಲ್ಲಿದ್ದು ಕಳೆದ ಮೂರು ತಿಂಗಳಿನಿಂದ ಗಡಿಯಲ್ಲಿ ಬಂಧಿಯಾಗಿ ನಿಲುಗಡೆಯಾಗಿರುವ ಭಾರತ ಸೇನೆಯ ಯೋಧರು ಕಾರ್ಯಾಚರಣೆಗೆ ಯಾವ ರೀತಿ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಸೇನಾ ಮುಖ್ಯಸ್ಥರು ಮಾಹಿತಿ ಪಡೆಯಲಿದ್ದಾರೆ.

ಮೊನ್ನೆ ಆಗಸ್ಟ್ 29 ಮತ್ತು 30ರ ಮಧ್ಯರಾತ್ರಿಯಲ್ಲಿ ಲಡಾಖ್‌ನ ಚುಶುಲ್ ಬಳಿಯ ದಕ್ಷಿಣದ ದಂಡೆಯ ಪಾಂಗೊಂಗ್ ತ್ಸೊ ಬಳಿ ಚೀನಾ ಸೈನಿಕರು ಭಾರತದ ಪ್ರದೇಶಗಳಿಗೆ ಅತಿಕ್ರಮಣ ಪ್ರವೇಶ ಮಾಡಲು ಸಂಚು ನಡೆಸಿದ್ದರು. ಈ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು. ಈ ಹಿನ್ನೆಲೆಯಲ್ಲಿ, ಇಂದು ಸೇನಾ ಮುಖ್ಯಸ್ಥರು ಭೇಟಿಯಾಗಿದ್ದು, ಅಲ್ಲಿ ಏನು ಮಾಹಿತಿ ಪಡೆಯುತ್ತಾರೆ, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಮತ್ತು ಸೇನೆ ಒಟ್ಟಾಗಿ ಏನು ನಿರ್ಣಯ ತೆಗೆದುಕೊಳ್ಳಲಿದೆ ಎಂಬ ಕುತೂಹಲವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

Ranji Trophy final: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಮತ್ತು ಕಾಶ್ಮೀರದ ನಾಯಕ, Video

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

SCROLL FOR NEXT