ಆಗಸ್ಟ್ ತಿಂಗಳಲ್ಲಿ ಬೆಂಗಳೂರು ದಕ್ಷಿಣ ಝೋನ್ ಕೋವಿಡ್ ಮರಣ ಪ್ರಮಾಣ ಏರಿಕೆ 
ದೇಶ

ಆಗಸ್ಟ್ ತಿಂಗಳಲ್ಲಿ ಬೆಂಗಳೂರು ದಕ್ಷಿಣ ಝೋನ್ ಕೋವಿಡ್ ಮರಣ ಪ್ರಮಾಣ ಏರಿಕೆ

ಆಗಸ್ಟ್ ತಿಂಗಳಲ್ಲಿ ಬೆಂಗಳೂರು ದಕ್ಷಿಣ ಝೋನ್ ಕೋವಿಡ್-19 ಮರಣ ಪ್ರಮಾಣ ಏರಿಕೆ ಕಂಡಿದೆ. 

ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಬೆಂಗಳೂರು ದಕ್ಷಿಣ ಝೋನ್ ಕೋವಿಡ್-19 ಮರಣ ಪ್ರಮಾಣ ಏರಿಕೆ ಕಂಡಿದೆ. ಕೋವಿಡ್-19 ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ 8 ಝೋನ್ ಗಳನ್ನು ರಚಿಸಲಾಗಿತ್ತು. ಈ ಪೈಕಿ ದಕ್ಷಿಣ ಝೋನ್ ನಲ್ಲಿ ಆಗಸ್ಟ್ ತಿಂಗಳಲ್ಲಿ ಮರಣ ಪ್ರಮಾಣ ದರ 2.18 ರಷ್ಟಿದೆ ಎಂದು ಝೋನಲ್ ಅಧಿಕಾರಿಗಳು ತಿಳಿಸಿದ್ದಾರೆ. 

ವಿಳಂಬಗತಿಯ ರಿಪೋರ್ಟಿಂಗ್, ಪರೀಕ್ಷೆಗಳಿಂದ ಜನರು ದೂರ ಉಳಿಯುತ್ತಿರುವುದು ಹಾಗೂ ಹಿರಿಯ ನಾಗರಿಕರಿಗೆ ಇರುವ ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ಮರಣ ಪ್ರಮಾಣ ಏರಿಕೆ ಕಂಡಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. 

ಆಗಸ್ಟ್ ಮೊದಲ ವಾರದಲ್ಲಿ ಸಿಎಫ್ಆರ್ 2.14 ರಷ್ಟಿತ್ತು. ಎರಡನೇ ವಾರದಲ್ಲಿ 2.28, ಮೂರನೇ ವಾರದಲ್ಲಿ 2.69, ನಾಲ್ಕನೇ ವಾರದಲ್ಲಿ 1.59 ರಷ್ಟಿತ್ತು ಎಂದು ತಿಳಿದುಬಂದಿದೆ. 

ಕೋವಿಡ್-19 ರೋಗ ಪ್ರಾರಂಭವಾದಾಗಿನಿಂದಲೂ ಸಹ ದಕ್ಷಿಣ ಝೋನ್ ನಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಈ ಪೈಕಿ ಬಿಟಿಎಂ ಲೇಔಟ್, ಬಸವನಗುಡಿ, ಜಯನಗರ, ಸುದ್ದಗುಂಟೆಪಾಳ್ಯ, ವಿಶ್ವೇಶ್ವರ ಪುರಂ, ಯಡಿಯೂರ್, ಪಟ್ಟಾಭಿರಾಮನಗರ, ಹೊಂಬೇಗೌಡನಗರಗಳಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. 

ಆಗಸ್ಟ್ ತಿಂಗಳಲ್ಲಿ ಕೊರೋನಾ ಪಾಸಿಟೀವ್ ಪ್ರಕರಣಗಳ ಪ್ರಮಾಣ ಶೇ.23 ರಿಂದ 18ಕ್ಕೆ ಇಳಿಕೆಯಾದರೂ ಮರಣ ಪ್ರಮಾಣ ಮಾತ್ರ ಏರಿಕೆಯಾಗಿದೆ.

"ರೋಗ ಲಕ್ಷಣಗಳು ಕಂಡುಬಂದರೂ ಸಹ ಜನರು ಆರೋಗ್ಯ ತಪಾಸಣೆ, ಪರೀಕ್ಷೆ ಮಾಡಿಸಿಕೊಳ್ಳುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಆದ್ದರಿಂದ ಈ ರೀತಿಯಾಗಿದೆ ಎನ್ನುತ್ತಾರೆ ಬಿಬಿಎಂಪಿ ದಕ್ಷಿಣ ಝೋನ್ ನ ಆರೋಗ್ಯ ಅಧಿಕಾರಿ ಡಾ. ಶಿವಕುಮಾರ್ 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

SCROLL FOR NEXT