ಪ್ರಿಯಾ ರಮಣಿ-ಎಂಜೆ ಅಕ್ಬರ್ 
ದೇಶ

ಸಾರ್ವಜನಿಕ ಹಿತಕ್ಕಾಗಿ ಲೈಂಗಿಕ ಕಿರುಕುಳ ಬಹಿರಂಗ-ನ್ಯಾಯಾಲಯಕ್ಕೆ ಪತ್ರಕರ್ತೆ ಪ್ರಿಯಾ ರಮಣಿ

ಸಾರ್ವಜನಿಕ ಹಿತಕ್ಕಾಗಿ  ಲೈಂಗಿಕ ಕಿರುಕುಳವನ್ನು ಬಹಿರಂಗಪಡಿಸಿದ್ದಾಗಿ ಮಾಜಿ ಕೇಂದ್ರ ಸಚಿವ ಎಂ. ಜೆ. ಅಕ್ಬರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಪತ್ರಕರ್ತೆ ಪ್ರಿಯಾ ರಮಣಿ, ನ್ಯಾಯಾಲಯವೊಂದಕ್ಕೆ ಇಂದು ಹೇಳಿದ್ದಾರೆ.

ನವದೆಹಲಿ: ಸಾರ್ವಜನಿಕ ಹಿತಕ್ಕಾಗಿ  ಲೈಂಗಿಕ ಕಿರುಕುಳವನ್ನು ಬಹಿರಂಗಪಡಿಸಿದ್ದಾಗಿ ಮಾಜಿ ಕೇಂದ್ರ ಸಚಿವ ಎಂ. ಜೆ. ಅಕ್ಬರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಪತ್ರಕರ್ತೆ ಪ್ರಿಯಾ ರಮಣಿ, ನ್ಯಾಯಾಲಯವೊಂದಕ್ಕೆ ಇಂದು ಹೇಳಿದ್ದಾರೆ.

ಪ್ರಿಯಾ ರಮಣಿ ವಿರುದ್ಧ ಅಕ್ಬರ್ ಸಲ್ಲಿಸಿದ್ದ ಕ್ರಿಮಿನಲ್ ಮಾನಷ್ಟ ದೂರಿನ ಅಂತಿಮ ವಿಚಾರಣೆ ಸಂದರ್ಭದಲ್ಲಿ ತಮ್ಮ ವಕೀಲರ ಮೂಲಕ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಶಾಲ್ ಪಹುಜಾ ಮುಂದೆ ರಮಣಿ ಈ ರೀತಿಯ ಹೇಳಿಕೆ ನೀಡಿದ್ದಾರೆ.

20 ವರ್ಷದ ಹಿಂದೆ ಪತ್ರಕರ್ತೆಯಾಗಿದ್ದಾಗ ಎಂಜಿ ಅಕ್ಬರ್ ಲೈಂಗಿಕ ಕಿರುಕುಳ ನೀಡಿರುವುದಾಗಿ 2018ರಲ್ಲಿ #ಮೀಟೂ ಆಂದೋಲನದ ವೇಳೆಯಲ್ಲಿ ರಮಣಿ ಆರೋಪಿಸಿದ್ದರು. 2018 ಅಕ್ಟೋಬರ್ 17ರಂದು ಅಕ್ಬರ್ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಕಾನೂನಿನ ಪ್ರಕಾರ ಸಾರ್ವಜನಿಕ ಒಳಿತಿಗಾಗಿ ಯಾವುದೇ ವ್ಯಕ್ತಿಯ ಸತ್ಯ ಹೇಳುವುದು ಮಾನಹಾನಿಯಲ್ಲ ಎಂದು ರಮಣಿ ಪರ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ರೆಬೆಕ್ಕಾ ಜಾನ್ ಹೇಳಿದರು.

ಸಾರ್ವಜನಿಕ ಹಿತದೃಷ್ಟಿಯಿಂದ ಮಾಡಿದ ನಿಜವಾದ ಅಪಖ್ಯಾತಿ ಮಾನಹಾನಿಯಲ್ಲ, ಇನ್ನೊಬ್ಬರ ಹಿತಸಕ್ತಿಯ ರಕ್ಷಣೆಗಾಗಿ
ಇನ್ನೊಬ್ಬರ ಮೇಲೆ ದೋಷಾರೋಪಣೆ ಮಾಡುವುದು ಮಾನಹಾನಿಯಲ್ಲ,ಇದರಲ್ಲಿ ಸತ್ಯವಿದ್ದು,ಸಾರ್ವಜನಿಕರ ಒಳಿತಿಗೆ ಸಂಬಂಧಿಸಿದೆ ಎಂದು ಅವರು ವರ್ಚುವಲ್ ವಿಚಾರಣೆಯ  ಸಮಯದಲ್ಲಿ ನ್ಯಾಯಾಲಯಕ್ಕೆ ತಿಳಿಸಿದರು.ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿದೆ.   

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT