ಜೈಶಂಕರ್ 
ದೇಶ

ಕೊರೋನ ಬಿಕ್ಕಟ್ಟು, ವಿದೇಶಿ ವಿದ್ಯಾರ್ಥಿಗಳ ಹಿತ ರಕ್ಷಣೆಗೆ ಸರ್ಕಾರ ಬದ್ಧ: ವಿದೇಶಾಂಗ ಸಚಿವ ಎಸ್ ಜೈಶಂಕರ್

ಕೋವಿಡ್ -19 ಸಾಂಕ್ರಾಮಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿದೇಶಿ ವಿದ್ಯಾರ್ಥಿಗಳ ಹಿತಾಸಕ್ತಿ ರಕ್ಷಿಸಬೇಕೆಂದು ಜಾಗತಿಕ ಸಮುದಾಯಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಮನವಿ ಮಾಡಿದ್ದಾರೆ.

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿದೇಶಿ ವಿದ್ಯಾರ್ಥಿಗಳ ಹಿತಾಸಕ್ತಿ ರಕ್ಷಿಸಬೇಕೆಂದು ಜಾಗತಿಕ ಸಮುದಾಯಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಮನವಿ ಮಾಡಿದ್ದಾರೆ.

ಜಿ- 20 ವಿದೇಶಾಂಗ ಮಂತ್ರಿಗಳ ವರ್ಚುವಲ್ ಸಭೆಯಲ್ಲಿ ಅವರು ಮಾತನಾಡಿದರು.ಅದೆ ರೀತಿ ನಾಗರಿಕರನ್ನು ಅವರ ತಾಯಿನಾಡಿಗೆ ಕಳುಹಿಸಲು ಸಹ ಕ್ರಮ ಕೈಗೊಳ್ಳಬೇಕು ಎಂದರು. ಈ ಸಭೆಯನ್ನು ಸೌದಿ ಅರೇಬಿಯಾ ಏರ್ಪಡಿಸಿದೆ. ಸೌದಿ ಅರೇಬಿಯಾ ಸಾಮ್ರಾಜ್ಯದ ವಿದೇಶಾಂಗ ವ್ಯವಹಾರಗಳ ಸಚಿವ  ರಾಜಕುಮಾರ ಫೈಸಲ್ ಬಿನ್ ಫರ್ಹಾನ್ ಅಲ್-ಸೌದ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಕೋವಿಡ್ -19 ಸಾಂಕ್ರಾಮಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ವಾಸ್ತವ ಸಭೆಯನ್ನು ಕರೆಯಲಾಯಿತು.ಕೋವಿಡ್ -19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಗಡಿಯುದ್ದಕ್ಕೂ ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಬಗ್ಗೆ ಚರ್ಚೆಗಳು ಕೇಂದ್ರೀಕೃತವಾಗಿದ್ದು ಗಡಿಯಾಚೆಗಿನ ನಿರ್ವಹಣಾ ಕ್ರಮಗಳಿಂದ ಕಲಿತ ಅನುಭವಗಳು ಮತ್ತು  ಪಾಠಗಳನ್ನು ಸಚಿವರು ವಿನಿಮಯ ಮಾಡಿಕೊಂಡರು. ವಂದೇ ಭಾರತ್ ಮಿಷನ್ ಸೇರಿದಂತೆ ಭಾರತ ವಿದೇಶಿ ನಾಗರಿಕರ ರಕ್ಷಣೆಗೆ ಕೈಗೊಂಡ ಕ್ರಮಗಳನ್ನು ಜಿ 20 ವಿದೇಶಾಂಗ ಸಚಿವರ ಸಭೆಗೆ ಶಂಕರ್ ವಿವರಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT