ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ನವ ದೆಹಲಿ: ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ಜನತೆ ಆತಂಕಪಡಬೇಕಾದ ಅಗತ್ಯವಿಲ್ಲ- ಕೇಜ್ರಿವಾಲ್ 

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಜನರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಜನರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಆಮ್ ಆದ್ಮಿ ಸರ್ಕಾರ ಕೋವಿಡ್-19 ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಾಗಿ ಮಾಡುತ್ತಿರುವುದರಿಂದ ಹೆಚ್ಚಿನ ಕೊರೋನಾ ವೈರಸ್ ಪ್ರಕರಣಗಳು  ಕಂಡುಬಂದಿವೆ ಎಂದು ಕೇಜ್ರಿವಾಲ್ ಆನ್ ಲೈನ್ ಮಾಧ್ಯಮದಲ್ಲಿ ವಿವರಿಸಿದ್ದಾರೆ.

ಜನರು ನಿರ್ಲಕ್ಷ್ಯ ತೋರದೆ ಕೋವಿಡ್-19 ವಿರುದ್ಧದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಸರ್ಕಾರ ಕೈಗೊಂಡ ಅನೇಕ ಕ್ರಮಗಳಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ಸಾವಿನ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ.

ಕೋವಿಡ್-19 ರೋಗಿಗಳಿಗೆ ಆಸ್ಪತ್ರೆಯಲ್ಲಿ  ಹಾಸಿಗೆಗಳ ಕೊರತೆಯಿಲ್ಲ, 14 ಸಾವಿರ ಹಾಸಿಗೆಗಳ ಪೈಕಿಯಲ್ಲಿ 5 ಸಾವಿರ ಹಾಸಿಗೆಗಳನ್ನು ಮಾತ್ರ ಪಡೆಯಲಾಗಿದೆ. ಈ ಪೈಕಿ 1600 ರಿಂದ 1700 ಹಾಸಿಗೆಗಳನ್ನು ಇತರ ರಾಜ್ಯಗಳಿಗೆ ಸೇರಿದ ರೋಗಿಗಳಿಗೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಶುಕ್ರವಾರ  69 ದಿನಗಳಲ್ಲಿ ಅತಿ ಹೆಚ್ಚು ಎನ್ನಬಹುದಾದ ದಾಖಲೆಯ 2,914 ಹೊಸ ಪ್ರಕರಣಗಳು ಕಂಡುಬಂದಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT