ಪ್ರಧಾನಿ ಮೋದಿ 
ದೇಶ

ಶಿಕ್ಷಕರ ದಿನಾಚರಣೆ: ಆದರ್ಶ ಶಿಕ್ಷಕ ಸರ್ವಪಲ್ಲಿ ರಾಧಾಕೃಷ್ಣನ್'ಗೆ ನಮನ ಸಲ್ಲಿಸಿ, ಗುರುಸಮಸ್ತರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ತತ್ವಜ್ಞಾನಿ, ವಿದ್ವಾಂಸ, ಭಾರತದ 2ನೇ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುಸಮಸ್ತರಿಗೆ ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ. 

ನವದೆಹಲಿ:  ತತ್ವಜ್ಞಾನಿ, ವಿದ್ವಾಂಸ, ಭಾರತದ 2ನೇ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುಸಮಸ್ತರಿಗೆ ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ. 

ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಡಾ.ಎಸ್.ರಾಧಾಕೃಷ್ನ್ ಅವರಿಗೆ ಗೌರವ ಸಲ್ಲಿಸುತ್ತಿದ್ದೇನೆ ಹಾಗೂ ದೇಶದ ಸರ್ವ ಶಿಕ್ಷಕರಿಗೂ ಹೃದಯಪೂರ್ವಕ ಶುಭಾಶಯಗಳನ್ನು ಹೇಳುತ್ತೇನೆಂದು ಹೇಳಿದ್ದಾರೆ.

ಮನಸ್ಸು ಮಾರ್ಪಡಿಸುವಲ್ಲಿ ಹಾಗೂ ದೇಶವನ್ನು ಕಟ್ಟುವಲ್ಲಿ ಶಿಕ್ಷಕರ ಪರಿಶ್ರಮಕ್ಕೆ ನಾವು ಅತ್ಯಂತ ಕೃತಜ್ಞರಾಗಿರುತ್ತೇವೆ. ಶಿಕ್ಷಕರ ದಿನದಂದು, ಶಿಕ್ಷಕರ ಪರಿಶ್ರಮಕ್ಕೆ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಡಾ.ಎಸ್.ರಾಧಾಕೃಷ್ಣನ್ ಅವರ ಜನ್ಮನದಿಂದು ಅವರಿಗೆ ನಾವು ಗೌರವ ಸಲ್ಲಿಸುತ್ತೇನೆ. #ನಮ್ಮಶಿಕ್ಷಕರುನಮ್ಮಹೀರೋಗಳು ಎಂದು ತಿಳಿಸಿದ್ದಾರೆ. 

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಭಾರತದ 2ನೇ ರಾಷ್ಟ್ರಪತಿಯಾಗಿದ್ದರು. 1962ರಲ್ಲಿ ಭಾರತದ ಶಿಕ್ಷಕನೊಬ್ಬ ಮೊಟ್ಟಮೊದಲ ಉಪರಾಷ್ಟ್ರಪತಿಯಾಗಿ ನೇಮಕಕೊಂಡ ರಾಧಾಕೃಷ್ಣನ್ ಅವರು, ರಾಜ್ಯಸಭೆಯಲ್ಲಿ ಸಂಸ್ಕೃತ ಶ್ಲೋಕಗಳ ಮೂಲಕ ಎಲ್ಲಾ ಸಂಸತ್ ಸದಸ್ಯರ ಗಮನ ಸೆಳೆಯುತ್ತಿದ್ದರು. ರಾಧಾಕೃಷ್ಣನ್ ಅವರ ಅಪಾರ ಸೇವೆಯನ್ನು ಗುರ್ತಿಸಿ ಗೌರವಿಸಿದ್ದ ಭಾರತ ಸರ್ಕಾರ ಉಪರಾಷ್ಟ್ರಪತಿ ಹುದ್ದೆಯಲ್ಲಿದ್ದಾಗಲೇ ಅವರಿಗೆ 1954ರಲ್ಲಿ ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT