ಕಿರಣ್ ರಿಜಿಜು 
ದೇಶ

ಚೀನಾ ಸೇನೆಯಿಂದ ಐವರು ಯುವಕರ ಅಪಹರಣ: ಪಿಎಲ್ ಎಗೆ ಭಾರತೀಯ ಸೇನೆಯಿಂದಹಾಟ್ ಲೈನ್ ಸಂದೇಶ

ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ನಿರಿ ಜಿಲ್ಲೆಯಿಂದ ಐವರು ಯುವಕರನ್ನು ಚೀನಾ ಸೇನೆ ಅಪಹರಿಸಿದ ವರದಿಗಳಿಗೆ ಸಂಬಂಧಿಸಿದಂತೆ ಭಾರತೀ ಸೇನೆ ಈಗಾಗಲೇ ಚೀನಾದ ಪೀಪಲ್ಸ್ ಲಿಬರೇಷನ್ ಆಫ್ ಆರ್ಮಿ(ಪಿಎಲ್ ಎ)ಗೆ ಹಾಟ್ ಲೈನ್ ಸಂದೇಶ ಕಳುಹಿಸಲಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಭಾನುವಾರ ತಿಳಿಸಿದ್ದಾರೆ.

ಇಟಾನಗರ: ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ನಿರಿ ಜಿಲ್ಲೆಯಿಂದ ಐವರು ಯುವಕರನ್ನು ಚೀನಾ ಸೇನೆ ಅಪಹರಿಸಿದ ವರದಿಗಳಿಗೆ ಸಂಬಂಧಿಸಿದಂತೆ ಭಾರತೀ ಸೇನೆ ಈಗಾಗಲೇ ಚೀನಾದ ಪೀಪಲ್ಸ್ ಲಿಬರೇಷನ್ ಆಫ್ ಆರ್ಮಿ(ಪಿಎಲ್ ಎ)ಗೆ ಹಾಟ್ ಲೈನ್ ಸಂದೇಶ ಕಳುಹಿಸಲಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಭಾನುವಾರ ತಿಳಿಸಿದ್ದಾರೆ.

ಅರುಣಾಚಲ ಪ್ರದೇಶದ ಗಡಿಯಲ್ಲಿ ಸ್ಥಾಪಿಸಲಾಗಿರುವ ಪಿಎಲ್ ಕೇಂದ್ರಕ್ಕೆ ಅಪಹರಣ ಕುರಿತು ಭಾರತೀಯ ಸೇನೆ ಈಗಾಗಲೇ ಹಾಟ್ ಲೈನ್ ಸಂದೇಶವನ್ನು ಕಳುಹಿಸಿದೆ. ಆ ಕಡೆಯಿಂದ ಪ್ರತಿಕ್ರಿಯೆ ನಿರೀಕ್ಷಿಸಲಾಗುತ್ತಿದೆ ಎಂದು ಎಂದು ಅರುಣಾಚಲ ಪಶ್ಚಿಮ ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ರಿಜಿಜು ಅವರು ಹೇಳಿದ್ದಾರೆ.

ವರದಿಗಳ ಪ್ರಕಾರ, ಬೇಟೆಯಾಡಲು ಹೋಗಿದ್ದ ಐವರು ಯುವಕರನ್ನು ನಾಚೊ ಬಳಿಯ ಕಾಡಿನಿಂದ ಅಪಹರಿಸಲಾಗಿದೆ.

ಚೀನಾದ ಪಿಎಲ್ ಎ ಸೈನಿಕರು ನಾಚೊ ವೃತ್ತದಿಂದ ತನ್ನ ಸಹೋದರ ಮತ್ತು ಇತರ ನಾಲ್ವರನ್ನು ಅಪಹರಿಸಲಾಗಿದೆ ಎಂದು ಅಪಹೃತರ ಕುಟುಂಬದ ಸದಸ್ಯರೊಬ್ಬರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT