ಸಾಂದರ್ಭಿಕ ಚಿತ್ರ 
ದೇಶ

ವಾಹನ ಕಳ್ಳತನವಾಗಿದೆ ಎಂದು ಮಾಲೀಕ ದೂರು ದಾಖಲಿಸಿದ ಒಂದು ದಿನದ ನಂತರ ಓವರ್ ಸ್ಪೀಡ್ ಎಂದು ಚಲನ್ ನೀಡಿದ ಪೊಲೀಸರು

ಪೂರ್ವ ದೆಹಲಿಯಿಂದ ಕಾರನ್ನು ಕಳ್ಳತನ ಮಾಡಲಾಗಿದೆ ಎಂದು ಕಾರ್ ಮಾಲೀಕರು ದೂರು ದಾಖಲಿಸಿದೆ 24 ಗಂಟೆಗಳ ನಂತರ ರಾಷ್ಟ್ರದ ರಾಜಧಾನಿಯ ಎನ್‌ಎಚ್ -10 ರಲ್ಲಿ ಅತಿವೇಗವಾಗಿ ಚಲಿಸಿದ್ದಕ್ಕಾಗಿ ಸಂಚಾರಿ ಪೊಲೀಸರು ಚಲನ್ ನೀಡಿದ್ದಾರೆ.

ನವದೆಹಲಿ: ಪೂರ್ವ ದೆಹಲಿಯಿಂದ ಕಾರನ್ನು ಕಳ್ಳತನ ಮಾಡಲಾಗಿದೆ ಎಂದು ಕಾರ್ ಮಾಲೀಕರು ದೂರು ದಾಖಲಿಸಿದೆ 24 ಗಂಟೆಗಳ ನಂತರ ರಾಷ್ಟ್ರದ ರಾಜಧಾನಿಯ ಎನ್‌ಎಚ್ -10 ರಲ್ಲಿ ಅತಿವೇಗವಾಗಿ ಚಲಿಸಿದ್ದಕ್ಕಾಗಿ ಸಂಚಾರಿ ಪೊಲೀಸರು ಚಲನ್ ನೀಡಿದ್ದಾರೆ.

ಆಗಸ್ಟ್ 24 ರ ರಾತ್ರಿ ಪಶ್ಚಿಮ ವಿನೋದ್ ನಗರದ ಆಸ್ಪತ್ರೆಯ ಬಳಿ ವಾಹನವನ್ನು ನಿಲ್ಲಿಸಲಾಗಿದ್ದು, ಮರುದಿನ ಮಧ್ಯಾಹ್ನ ಕಾಣೆಯಾಗಿದೆ.

ಒಂದು ದಿನದ ನಂತರ, ವಾಹನವು ಮುಂಡ್ಕಾ ಬಳಿ ವೇಗದ ಮಿತಿಯನ್ನು ಉಲ್ಲಂಘಿಸಿರುವುದು ಕಂಡುಬಂದ ಕಾರಣ ದಂಡವನ್ನು ಪಾವತಿಸುವಂತೆ ಕಾರಿನ ಮಾಲೀಕರಿಗೆ ಸಂಚಾರಿ ಪೊಲೀಸರು ಚಲನ್ ಕಳುಹಿಸಿದ್ದಾರೆ.

ಅವರ ಪತ್ನಿ, ರಂಗಭೂಮಿ ಕಲಾವಿದೆ, ತುರ್ತು ಪರಿಸ್ಥಿತಿಯ ಕಾರಣ ಆಸ್ಪತ್ರೆಯ ಬಳಿ ಕಾರನ್ನು ರಸ್ತೆಯಲ್ಲಿ ನಿಲ್ಲಿಸಬೇಕಾಯಿತು. "ದುರದೃಷ್ಟವಶಾತ್, ಕುಟುಂಬ ತುರ್ತುಸ್ಥಿತಿ ಇರುವುದರಿಂದ ನಾನು ಕಾರನ್ನು ರಸ್ತೆಯ ಮೇಲೆ ನಿಲ್ಲಿಸಿದೆ" ಎಂದು ಅವರು ಹೇಳಿದ್ದಾರೆ.

ಕಾರು ಕಳ್ಳತನವಾದ ಬಗ್ಗೆ ಆಗಸ್ಟ್ 25ರಂದು ಆನ್ ಲೈನ್ ಮೂಲಕ ಎಫ್ಐಆರ್ ದಾಖಲಿಸಿರುವುದಾಗಿ ಕಾರು ಮಾಲೀಕರ ಪತ್ನಿ ಹೇಳಿದ್ದಾರೆ. ಆದರೆ ದೂರು ದಾಖಲಿಸಿದ ಒಂದು ದಿನದ ನಂತರ ಕಾರು ಪತ್ತೆಯಾಗಿದ್ದರೂ ಅದನ್ನು ವಶಕ್ಕೆ ಪಡೆಯದ ಪೊಲೀಸರು, ಓವರ್ ಸ್ಪೀಡ್ ಗಾಗಿ ಮಾಲೀಕರಿಗೆ ದಂಡ ವಿಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT