ಸಾಂದರ್ಭಿಕ ಚಿತ್ರ 
ದೇಶ

ಸರ್ಕಾರಿ ಹುದ್ದೆ ನೇಮಕಾತಿಗೆ ನಿರ್ಬಂಧ ಅಥವಾ ನಿಷೇಧ ಹೇರಿಲ್ಲ:ಕೇಂದ್ರ ಸರ್ಕಾರ ಸ್ಪಷ್ಟನೆ

ಕೊರೋನಾ ವೈರಸ್ ಸಾಂಕ್ರಾಮಿಕದ ನಡುವೆ ದೇಶದ ಆರ್ಥಿಕ ಪರಿಸ್ಥಿತಿ ಕುಸಿಯುತ್ತಿರುವಾಗ ಸರ್ಕಾರಿ ಅಧಿಕಾರಿಗಳು ಖರ್ಚುವೆಚ್ಚಗಳಲ್ಲಿ ಕಡಿತ ಮಾಡಬೇಕೆಂದು ಖರ್ಚುವೆಚ್ಚಗಳ ಇಲಾಖೆ ಹೊರಡಿಸಿರುವ ಸುತ್ತೋಲೆ ಸರ್ಕಾರಿ ಉದ್ಯೋಗಗಳ ನೇಮಕಾತಿಯ ಮೇಲೆ ಯಾವುದೇ ರೀತಿಯ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ನವದೆಹಲಿ: ಕೊರೋನಾ ವೈರಸ್ ಸಾಂಕ್ರಾಮಿಕದ ನಡುವೆ ದೇಶದ ಆರ್ಥಿಕ ಪರಿಸ್ಥಿತಿ ಕುಸಿಯುತ್ತಿರುವಾಗ ಸರ್ಕಾರಿ ಅಧಿಕಾರಿಗಳು ಖರ್ಚುವೆಚ್ಚಗಳಲ್ಲಿ ಕಡಿತ ಮಾಡಬೇಕೆಂದು ಖರ್ಚುವೆಚ್ಚಗಳ ಇಲಾಖೆ ಹೊರಡಿಸಿರುವ ಸುತ್ತೋಲೆ ಸರ್ಕಾರಿ ಉದ್ಯೋಗಗಳ ನೇಮಕಾತಿಯ ಮೇಲೆ ಯಾವುದೇ ರೀತಿಯ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಮೊನ್ನೆ 4ರಂದು ಹೊರಡಿಸಿರುವ ಖರ್ಚುವೆಚ್ಚಗಳ ಇಲಾಖೆಯ ಸುತ್ತೋಲೆ ಸರ್ಕಾರದ ಇಲಾಖೆಗಳಲ್ಲಿ ಹುದ್ದೆಗಳ ನೇಮಕದ ಬಗ್ಗೆ ಆಂತರಿಕ ವಿಧಾನವನ್ನು ಅಳವಡಿಸಿಕೊಂಡಿದೆಯೇ ಹೊರತು ನೇಮಕಾತಿ ವಿಧಾನದ ಮೇಲೆ ಯಾವುದೇ ರೀತಿಯ ಅಡ್ಡ ಪರಿಣಾಮ ಬೀರುವುದಿಲ್ಲ ಎಂದು ಹಣಕಾಸು ಸಚಿವಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಟ್ವೀಟ್ ಗೆ ಪ್ರತಿಕ್ರಿಯಿಸಿದೆ.

ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಹುದ್ದೆಗಳ ನೇಮಕಾತಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಸ್ಟಾಫ್ ಸೆಲೆಕ್ಷನ್ ಕಮಿಷನ್, ಯುಪಿಎಸ್ ಸಿ, ರೈಲ್ವೆ ನೇಮಕಾತಿ ಮಂಡಳಿ ಮೊದಲಾದವುಗಳ ಮೂಲಕ ಹಿಂದಿನಂತೆಯೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದೆ.

ಮೊನ್ನೆ ಸೆಪ್ಟೆಂಬರ್ 4ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ, ಖರ್ಚುವೆಚ್ಚಗಳ ಇಲಾಖೆ ಕೆಲವು ಅಭಿವೃದ್ಧಿರಹಿತ ಖರ್ಚುವೆಚ್ಚಗಳಿಗೆ ಕಡಿತ ಹಾಕಬೇಕೆಂದು ಹೇಳಿದ್ದು, ಪ್ರಮುಖ ಆದ್ಯತಾ ಯೋಜನೆಗಳಿಗೆ ಹಣ, ಸಂಪನ್ಮೂಲ ಅವಶ್ಯಕತೆಗಳನ್ನು ಕ್ರೋಢೀಕರಿಸಬೇಕಾಗಿದೆ ಎಂದು ಹೇಳಿದೆ.

ಈ ಸುತ್ತೋಲೆ ಬಗ್ಗೆ ರಾಹುಲ್ ಗಾಂಧಿ ಟೀಕಿಸಿದ್ದರು. ಮೋದಿ ಸರ್ಕಾರ ಖಾಸಗೀಕರಣ ಬಗ್ಗೆ ಹೆಚ್ಚು ಯೋಚಿಸುತ್ತಿದ್ದು ಸರ್ಕಾರದ ಇಲಾಖೆಗಳ ಬಗ್ಗೆ ಕಾಳಜಿ ಹೊಂದಿಲ್ಲ. ಸರ್ಕಾರಕ್ಕೆ ಕೋವಿಡ್ ಒಂದು ಕುಂಟು ನೆಪವಾಗಿದೆ,ಸರ್ಕಾರದ ಎಲ್ಲಾ ಶಾಶ್ವತ ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕಲು ಸರ್ಕಾರ ನೋಡುತ್ತಿದೆ, ಯುವಕರ ಭವಿಷ್ಯವನ್ನು ಮೋದಿಯವರು ಕಸಿಯಲು ನೋಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.

ಭಾರತದ ಜಿಡಿಪಿ ಕಳೆದ ಏಪ್ರಿಲ್ ನಿಂದ ಜೂನ್ ವರೆಗಿನ ತ್ರೈಮಾಸಿಕದಲ್ಲಿ ಶೇಕಡಾ 23.9ರಷ್ಟಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT