ಅಪಘಾತಕ್ಕೀಡಾದ ಕಾರು 
ದೇಶ

ಆಂಧ್ರ ಪ್ರದೇಶ:ಅಪಘಾತಕ್ಕೀಡಾದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬೆಂಗಾವಲು ವಾಹನ, ಪ್ರಾಣಾಪಾಯದಿಂದ ಪಾರು

ಆಂಧ್ರ ಪ್ರದೇಶದ ಅಮರಾವತಿಯಿಂದ ಹೈದರಾಬಾದ್ ಗೆ ಮರಳುತ್ತಿದ್ದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಬೆಂಗಾವಲು ವಾಹನ ಯಡದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಹತ್ತಿರ ದಂಡುಮಲ್ಕಪುರಂ ಎಂಬಲ್ಲಿ ಅಪಘಾತಕ್ಕೀಡಾಗಿದೆ.

ಹೈದರಾಬಾದ್: ಆಂಧ್ರ ಪ್ರದೇಶದ ಅಮರಾವತಿಯಿಂದ ಹೈದರಾಬಾದ್ ಗೆ ಮರಳುತ್ತಿದ್ದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಬೆಂಗಾವಲು ವಾಹನ ಯಡದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಹತ್ತಿರ ದಂಡುಮಲ್ಕಪುರಂ ಎಂಬಲ್ಲಿ ಅಪಘಾತಕ್ಕೀಡಾಗಿದೆ.

ಕಾರು ರಸ್ತೆಯಲ್ಲಿ ಹೋಗುತ್ತಿದ್ದಾಗ ಹಸುವೊಂದು ಹೆದ್ದಾರಿಯಲ್ಲಿ ಅಡ್ಡ ಬಂದು ಹಠಾತ್ತನೆ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ಬಂದ ಈ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಚಂದ್ರಬಾಬು ನಾಯ್ಡು ಅವರು ಮತ್ತೊಂದು ಬುಲ್ಲೆಟ್ ಪ್ರೂಫ್ ಬೆಂಗಾವಲು ಕಾರಿನಲ್ಲಿ ಇದ್ದ ಕಾರಣ ಯಾವುದೇ ಗಾಯಗಳಾಗಿಲ್ಲ. ಬೆಂಗಾವಲು ವಾಹನದ ಒಳಗಿದ್ದ ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಂತರ ಮತ್ತೊಂದು ಕಾರಿನಲ್ಲಿ ಎಲ್ಲರೂ ಕುಳಿತು ಹೈದರಾಬಾದ್ ಕಡೆ ಪ್ರಯಾಣಿಸಿದರು.

ಅಪಘಾತ ಆಗಿದ್ದೇಗೆ: ವಿಜಯವಾಡ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಂದ್ರಬಾಬು ನಾಯ್ಡು ಅವರು ಕಾರಿನಲ್ಲಿ ಹೈದರಾಬಾದಿನ ತಮ್ಮ ನಿವಾಸಕ್ಕೆ ಹಿಂತಿರುಗುತ್ತಿದ್ದರು. ಅವರ ವಾಹನದ ಮುಂದೆ 3, ಹಿಂದೆ ಮೂರು ಬೆಂಗಾವಲು ವಾಹನಗಳಿದ್ದವು.
ಮೊದಲಿನ ಬೆಂಗಾವಲು ಕಾರು ಹಸು ಅಡ್ಡ ಬಂದಿದ್ದರಿಂದ ಹಠಾತ್ತನೆ ಬ್ರೇಕ್ ಹಾಕಿದರು, ಆಗ ಅದರ ಹಿಂದಿನ ವಾಹನ ಕೂಡ ಹಠಾತ್ ಬ್ರೇಕ್ ಹಾಕಬೇಕಾಯಿತು. ಮೂರನೇ ವಾಹನ ಬ್ರೇಕ್ ಹಾಕಿ ಅದರ ಮುಂಭಾಗ ಸಂಪೂರ್ಣ ಜಖಂ ಆಯಿತು, ಚಂದ್ರಬಾಬು ನಾಯ್ಡು ಅವರ ಕಾರು ಕೂಡ ಹಠಾತ್ ಬ್ರೇಕ್ ಹಾಕಿದರೂ ಅದಕ್ಕೆ ಏನೂ ಆಗಲಿಲ್ಲ. ಮೂವರು ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT