ಮಹಾರಾಷ್ಟ್ರ ವಿಧಾನ ಭವನ 
ದೇಶ

ಕೋವಿಡ್-19, ಶಾಸಕರ ವಿರೋಧಗಳ ನಡುವೆ ಮಹಾರಾಷ್ಟ್ರ ವಿಧಾನಸಭೆಯ 2 ದಿನಗಳ ಮುಂಗಾರು ಅಧಿವೇಶನ ಆರಂಭ

ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಮಹಾರಾಷ್ಟ್ರ ವಿಧಾನಸಭೆಯ ಎರಡು ದಿನಗಳ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದೆ.

ಮುಂಬೈ: ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಮಹಾರಾಷ್ಟ್ರ ವಿಧಾನಸಭೆಯ ಎರಡು ದಿನಗಳ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದೆ. ಉಪಾಧ್ಯಕ್ಷ ನರಹರಿ ಝಿರ್ವಾಲ್, ಕೋವಿಡ್-19 ಹಿನ್ನೆಲೆಯಲ್ಲಿ ಸದಸ್ಯರು ಮಾಸ್ಕ್ ಧರಿಸುವಂತೆ, ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ, ಕ್ರಾಸ್ ಚಿಹ್ನೆಯಿರುವ ಸೀಟಿನಲ್ಲಿ ಕೂರದಂತೆ ಸದನದ ಸದಸ್ಯರಿಗೆ ಮಾರ್ಗದರ್ಶನ ನೀಡಿದರು.

ಇಬ್ಬರು ಕುಳಿತುಕೊಳ್ಳುವಲ್ಲಿ ಒಬ್ಬರು ಸದಸ್ಯರಿಗೆ ಮಾತ್ರ ಈ ಬಾರಿ ಅವಕಾಶ ಕಲ್ಪಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸದನ ಸದಸ್ಯರು ವಿದ್ಯಾರ್ಥಿಗಳು ಮತ್ತು ಪ್ರೇಕ್ಷಕರು ಕುಳಿತುಕೊಳ್ಳುವ ಗ್ಯಾಲರಿಯಲ್ಲಿ ಸಹ ಕುಳಿತರು. ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ನಾನಾ ಪಟೊಲ್ ಅವರು ಕೊರೋನಾ ಪಾಸಿಟಿವ್ ಬಂದು ಗೈರಾಗಿರುವ ಹಿನ್ನೆಲೆಯಲ್ಲಿ ಉಪ ಸ್ಪೀಕರ್ ಸದನ ಕಲಾಪವನ್ನು ನಡೆಸಿದರು.

ಇಂದು ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಜಿಎಸ್ ಟಿ ಮತ್ತು ಆಕಸ್ಮಿಕ ನಿಧಿಗೆ ಸಂಬಂಧಪಟ್ಟ ವಿಧೇಯಕಗಳನ್ನು ಮಂಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮುಂದೂಡುವುದು, ಮೇಯರ್ ಹುದ್ದೆಗಳ ಭರ್ತಿಗಳನ್ನು ಮುಂದೂಡುವಂತೆ ಗ್ರಾಮೀಣ ಮತ್ತು ನಗರಾಭಿವೃದ್ಧಿ ಇಲಾಖೆಗಳಿಗೆ ಸಂಬಂಧಿಸಿದ ವಿಧೇಯಕಗಳನ್ನು ಸಹ ಮಂಡಿಸಲಾಯಿತು.

2020-21ನೇ ಸಾಲಿಗೆ ಸಂಬಂಧಿಸಿದ ಪೂರಕ ಬೇಡಿಕೆಗಳನ್ನು ಉಪ ಮುಖ್ಯಮಂತ್ರಿ ಮಂಡಿಸಿದರು. ಇದಕ್ಕೆ ಸಂಬಂಧಿಸಿದ ಚರ್ಚೆಗಳು ಸದನದಲ್ಲಿ ನಾಳೆ ನಡೆಯಲಿವೆ.

ಇಂದು ಮತ್ತು ನಾಳೆ ನಡೆಯುವ ಕಲಾಪದಲ್ಲಿ ಪ್ರಶ್ನೋತ್ತರ ಅವಧಿ, ಚರ್ಚೆಗಳು ಇರುವುದಿಲ್ಲ. ಕಳೆದ ನವೆಂಬರ್ ನಲ್ಲಿ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಡಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಡೆಯುತ್ತಿರುವ ಮೊದಲ ಮುಂಗಾರು ಅಧಿವೇಶನ ಇದಾಗಿದೆ.

ಅಧಿವೇಶನ ಹಿನ್ನೆಲೆಯಲ್ಲಿ ನಿನ್ನೆಯವರೆಗೆ ಶಾಸಕರು, ಸಚಿವರು, ಅಧಿಕಾರಿಗಳು, ಶಾಸಕರ ಸಿಬ್ಬಂದಿ, ಪತ್ರಕರ್ತರು ಸೇರಿದಂತೆ 2 ಸಾವಿರದ 115 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಅವರಲ್ಲಿ 58 ಮಂದಿಗೆ ಸೋಂಕು ದೃಢಪಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT