ರಾಷ್ಟ್ರಪತಿ ರಾಮನಾಥ್ ಕೋವಿಂದ್ 
ದೇಶ

ಶಿಕ್ಷಣ ನೀತಿ-2020ರ ಯಶಸ್ವಿ ಜಾರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು:ರಾಷ್ಟ್ರಪತಿ ಕೋವಿಂದ್

ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಯಶಸ್ವಿ ಜಾರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪರಿಣಾಮಕಾರಿ ಕೊಡುಗೆಯನ್ನು ಅವಲಂಬಿಸಿದೆ. ಭಾರತದ ಸಂವಿಧಾನದೊಳಗೆ ಶಿಕ್ಷಣ ಒಂದು ಪ್ರಬಲವಾದ ಅಸ್ತ್ರವಾಗಿದೆ. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಒಟ್ಟಾಗಿ ಇವುಗಳನ್ನು ಯಶಸ್ವಿಯಾಗಿ ಜಾರಿಗೆ ತರಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದ್ದಾರೆ.

ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಯಶಸ್ವಿ ಜಾರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪರಿಣಾಮಕಾರಿ ಕೊಡುಗೆಯನ್ನು ಅವಲಂಬಿಸಿದೆ. ಭಾರತದ ಸಂವಿಧಾನದೊಳಗೆ ಶಿಕ್ಷಣ ಒಂದು ಪ್ರಬಲವಾದ ಅಸ್ತ್ರವಾಗಿದೆ. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಒಟ್ಟಾಗಿ ಇವುಗಳನ್ನು ಯಶಸ್ವಿಯಾಗಿ ಜಾರಿಗೆ ತರಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದ್ದಾರೆ.

ಅವರು ಇಂದು ವರ್ಚುವಲ್ ಕಾನ್ಫರೆನ್ಸ್ ಮೂಲಕ ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಉದ್ದೇಶಿಸಿ ಮಾತನಾಡಿದರು. ಎಲ್ಲಾ ಕ್ಷೇತ್ರಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ರಾಷ್ಟ್ರೀಯ ಸಂಶೋಧನಾ ಫೌಂಡೇಶನ್ ನ್ನು ಸ್ಥಾಪಿಸಲಾಗುವುದು. ಸಂಶೋಧನೆಯ ಸಂಸ್ಕೃತಿಯನ್ನು ಹೆಚ್ಚಿಸಲು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ರಾಷ್ಟ್ರೀಯ ಸಂಶೋಧನಾ ಕೇಂದ್ರದ ಮೂಲಕ ಕೆಲಸ ಮಾಡಬೇಕು ಎಂದರು.

ನೂತನ ಶಿಕ್ಷಣ ನೀತಿಯಲ್ಲಿ ಭಾರತದ ಭಾಷೆಗಳು, ಕಲೆ, ಸಂಸ್ಕೃತಿಗೆ ಆದ್ಯತೆ ನೀಡಲಾಗಿದೆ. ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಭಾರತದ ಭಾಷೆಗಳು ಸಮಗ್ರತೆ ಮತ್ತು ಐಕ್ಯತೆಯನ್ನು ಬಲಪಡಿಸುತ್ತದೆ. ತಂತ್ರಜ್ಞಾನಗಳ ಸಮಗ್ರತೆಯನ್ನು ಬಳಸುವ ಮೂಲಕ ಕಲಿಕೆಯ ಪ್ರಕ್ರಿಯೆ ಉತ್ತಮವಾಗಿ ವಿದ್ಯಾರ್ಥಿಗಳ ಭವಿಷ್ಯ ಪ್ರಜ್ವಲವಾಗುತ್ತದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ತಂತ್ರಜ್ಞಾನ ವೇದಿಕೆಯನ್ನು ಸ್ಥಾಪಿಸಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT