ಕಂಗನಾ ರನೌತ್ 
ದೇಶ

ಕಂಗನಾ ರನೌತ್ ಗೆ 'ವೈ'ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ಸಮ್ಮತಿ

ನಟಿ ಕಂಗನಾ ರನೌತ್‌ಗೆ 'ವೈ ಶ್ರೇಣಿಯ ಭದ್ರತೆಯನ್ನು ಕೇಂದ್ರ ಅನುಮೋದಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ವೈ ಶ್ರೇಣಿಯು  1 ಅಥವಾ 2 ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ  ವ್ಯವಸ್ಥೆಯನ್ನು ಹೊಂದಿರುತ್ತದೆ.

ನವದೆಹಲ್ಲಿ: ನಟಿ ಕಂಗನಾ ರನೌತ್‌ಗೆ 'ವೈ ಶ್ರೇಣಿಯ ಭದ್ರತೆಯನ್ನು ಕೇಂದ್ರ ಅನುಮೋದಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ವೈ ಶ್ರೇಣಿಯು  1 ಅಥವಾ 2 ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ  ವ್ಯವಸ್ಥೆಯನ್ನು ಹೊಂದಿರುತ್ತದೆ.

ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯದಲ್ಲಿ ರನೌತ್‌ಗೆ ಭದ್ರತೆ ಒದಗಿಸಲು ನಿರ್ಧರಿಸಿದ ಒಂದು ದಿನದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ನಟಿ ಕಂಗನಾ ಮುಂಬೈಗೆ ಭೇಟಿ ನೀಡುವ ಸಮಯದಲ್ಲಿ ಅವರುಗೆ ವೈ ಶ್ರೇಣಿಯ ಭದ್ರತೆ ನಿಡಲು ಯೋಚಿಸುತ್ತಿದೆ. ಶಿಮ್ಲಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುವಾಗ ಮುಖ್ಯಮಂತ್ರಿ ಇದನ್ನು ಬಹಿರಂಗಪಡಿಸಿದ್ದಾರೆ.

"ಕಂಗನಾ ಅವರು ಹಿಮಾಚಲ ಪ್ರದೇಶದ ಮಗಳಾಗಿದ್ದು ಪ್ರಸಿದ್ಧ ವ್ಯಕ್ತಿಯಾಗಿರುವುದರಿಂದ ಅವರಿಗೆ  ಭದ್ರತೆಯನ್ನು ಒದಗಿಸುವುದು ನಮ್ಮ ಕರ್ತವ್ಯ" ಎಂದು ಹಿಮಾಚಲ ಪ್ರದೇಶ ಸಿಎಂ ಹೇಳಿದರು.

ಈ ನಡುವೆ ಮುಂಬೈ ಮತ್ತು ಮಹಾರಾಷ್ಟ್ರದ ವಿರುದ್ಧ ಮಾಡಿದ ಟೀಕೆಗಳಿಗೆ ನಟಿ ಕ್ಷಮೆಯಾಚಿಸಬೇಕು ಎಂದು ಭಾನುವಾರ ಶಿವಸೇನೆ ಸಂಸದ ಸಂಜಯ್ ರೌತ್ ಒತ್ತಾಯಿಸಿದ್ದರು.

ಕಂಗನಾ ಇತ್ತೀಚೆಗೆ ಟ್ವೀಟ್ ನಲ್ಲಿ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ್ದರು "ಮುಂಬೈ ಪಾಕಿಸ್ತಾನ ಆಕ್ರಮಿತ-ಕಾಶ್ಮೀರದಂತೆ ಏಕೆ ಬದಲಾಗಿದೆ?" ಕಂಗನಾ ಇತ್ತೀಚೆಗೆ ಟ್ವೀಟ್ ನಲ್ಲಿ ಕೇಳಿದ್ದು, ಸೆಪ್ಟೆಂಬರ್ 1ರ ವರದಿಯೊಂದನ್ನು ಟ್ಯಾಗ್ ಮಾಡಿ, ಅಲ್ಲಿ ನಗರ ಪೊಲೀಸರಿಂದ ಭಯವಿದ್ದು ನಾನು ಮುಂಬೈಗೆ ಮರಳುವುದಿಲ್ಲ ಎಂದಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT