ರಕ್ಷಣಾ ಕಾರ್ಯ 
ದೇಶ

ಕೊಯಮತ್ತೂರಿನಲ್ಲಿ ಮೂರು ಹಂತದ ಕಟ್ಟಡ ಕುಸಿತ:ಓರ್ವ ಮಹಿಳೆ ಸಾವು, ಸಿಕ್ಕಿಹಾಕಿಕೊಂಡಿರುವ ಮೂವರು

ಇಲ್ಲಿನ ಚೆಟ್ಟಿ ಸ್ಟ್ರೀಟ್ ಹತ್ತಿರ ಕೆಸಿ ತೊಟ್ಟಮ್ ಎಂಬಲ್ಲಿ ಮೂರು ಹಂತದ ಕಟ್ಟಡ ಕುಸಿದು ಬಿದ್ದು ಅವಶೇಷಗಳಡಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು ಮೂವರು ಸಿಲುಕಿ ಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕೊಯಮತ್ತೂರು: ಇಲ್ಲಿನ ಚೆಟ್ಟಿ ಸ್ಟ್ರೀಟ್ ಹತ್ತಿರ ಕೆಸಿ ತೊಟ್ಟಮ್ ಎಂಬಲ್ಲಿ ಮೂರು ಹಂತದ ಕಟ್ಟಡ ಕುಸಿದು ಬಿದ್ದು ಅವಶೇಷಗಳಡಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು ಮೂವರು ಸಿಲುಕಿ ಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕಳೆದ ರಾತ್ರಿ 8.40ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು ತೀವ್ರ ಮಳೆಯಿಂದಾಗಿ ಕಟ್ಟಡ ಕುಸಿಯಿತು ಎಂದು ಹೇಳಲಾಗುತ್ತಿದೆ. ಕೂಡಲೇ ಅಗ್ನಿಶಾಮಕ ಮತ್ತು ಪರಿಹಾರ ತಂಡಗಳು ಸ್ಥಳಕ್ಕೆ ಧಾವಿಸಿ ಇಬ್ಬರು ಮಹಿಳೆಯರು, ಒಬ್ಬ ಪುರುಷ ಮತ್ತು 5 ವರ್ಷದ ಮಗುವನ್ನು ರಕ್ಷಿಸಿದ್ದಾರೆ.

ಅವಶೇಷಗಳಡಿಯಲ್ಲಿ ಸಿಲುಕಿರುವವರಿಗೆ ಆಮ್ಲಜನಕದ ಪೂರೈಕೆಗಾಗಿ ಕಟ್ಟಡದ ಹಿಂಭಾಗದಲ್ಲಿ ರಕ್ಷಣಾ ಸಿಬ್ಬಂದಿ ಮಣ್ಣನ್ನು ಕೊರೆದರು. ಮೃತಪಟ್ಟವರನ್ನು 27 ವರ್ಷದ ಶ್ವೇತಾ ಎಂದು ಗುರುತಿಸಲಾಗಿದೆ. ರಕ್ಷಣಾ ಕಾರ್ಯ ನಡೆಯುತ್ತಿರುವಾಗಲೇ ಆಕೆ ಮೃತಪಟ್ಟಿದ್ದರು. ಅವರ 65 ವರ್ಷದ ಅತ್ತೆ ಮತ್ತು 45 ವರ್ಷದ ಅತ್ತಿಗೆ ಕವಿತಾರನ್ನು ರಕ್ಷಿಸಲಾಗಿದೆ. ಎರಡು ಗಂಟೆ ಕಳೆದ ನಂತರ ಶ್ವೇತಾಳ 5 ವರ್ಷದ ಮಗನನ್ನು ರಕ್ಷಿಸಿದ್ದಾರೆ. ಎಲ್ಲರನ್ನೂ ಕೊಯಮತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಕೆ ರಾಜಮಣಿ. ನಗರ ಪೊಲೀಸ್ ಆಯುಕ್ತ ಸುಮಿತ್ ಶರಣ್, ಉಪ ಆಯುಕ್ತರಾದ ಜಿ ಸ್ಟಾಲಿನ್, ಇ ಎಸ್ ಉಮಾ ಆಗಮಿಸಿ ಪರಿಸ್ಥಿತಿ ನಿಗಾ ವಹಿಸುತ್ತಿದ್ದಾರೆ.

ಕಳೆದ ಡಿಸೆಂಬರ್ ತಿಂಗಳಲ್ಲಿ ಕೊಯಮತ್ತೂರಿಗೆ ಹತ್ತಿರದ ಮೆಟ್ಟುಪಾಲಯಂನ ನಡೂರ್ ಗ್ರಾಮದಲ್ಲಿ 20 ಅಡಿ ಎತ್ತರದ ಗೋಡೆ ಕುಸಿದು ನಾಲ್ಕು ಮನೆಗಳು ಕುಸಿದಿದ್ದರಿಂದ ಸುಮಾರು 17 ಮಂದಿ ಮೃತಪಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT