ಹೊಸ ಸ್ಮಾರ್ಟ್ ಫೋನ್ ಗಳೊಂದಿಗೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕಿ 
ದೇಶ

ತನ್ನ ವಿದ್ಯಾರ್ಥಿಗಳ ಆನ್‌ಲೈನ್ ತರಗತಿಗಾಗಿ 16 ಸ್ಮಾರ್ಟ್‌ಫೋನ್‌ ಖರೀದಿಸಿದ ತಮಿಳುನಾಡು ಶಿಕ್ಷಕಿ 

ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಎಲ್ಲಾ ಮಕ್ಕಳಿಗೂ ಆನ್ ಲೈನ್ ಶಿಕ್ಷಣ ಅನಿವಾರ್ಯವಾಗಿದ್ದು, ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ತನ್ನಉಳಿತಾಯದ ಹಣದಿಂದ ವಿದ್ಯಾರ್ಥಿಗಳಿಗೆ 16 ಸ್ಮಾರ್ಟ್‌ಫೋನ್‌ಗಳು ಮತ್ತು ಸಿಮ್ ಕಾರ್ಡ್‌ಗಳನ್ನು ಖರೀದಿಸಿದ್ದಾರೆ.

ಪೆರಂಬಲೂರು: ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಎಲ್ಲಾ ಮಕ್ಕಳಿಗೂ ಆನ್ ಲೈನ್ ಶಿಕ್ಷಣ ಅನಿವಾರ್ಯವಾಗಿದ್ದು, ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ತನ್ನಉಳಿತಾಯದ ಹಣದಿಂದ ವಿದ್ಯಾರ್ಥಿಗಳಿಗೆ 16 ಸ್ಮಾರ್ಟ್‌ಫೋನ್‌ಗಳು ಮತ್ತು ಸಿಮ್ ಕಾರ್ಡ್‌ಗಳನ್ನು ಖರೀದಿಸಿದ್ದಾರೆ.

ಸ್ಮಾರ್ಟ್ ಫೋನ್ ಗಾಗಿ ಒಂದು ಲಕ್ಷ ಖರ್ಚು ರೂ. ಖರ್ಚು ಮಾಡಿರುವ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಶಿಕ್ಷಕಿ ಕೆ ಬೈರವಿ ಅವರು, ಖಾಸಗಿ ಶಾಲೆಗಳಂತೆಯೇ ತನ್ನ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪಾಠಗಳನ್ನು ನಡೆಸಲು ಬಯಸುತ್ತೇನೆ ಎಂದು ಎಲಾಂಬಲೂರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆಕೆಯ ವಿದ್ಯಾರ್ಥಿಗಳು ಮುಂದಿನ ವರ್ಷ ಬೋರ್ಡ್ ಪರೀಕ್ಷೆಗೆ ಹಾಜರಾಗಲಿದ್ದಾರೆ. ಅವರ ವಿದ್ಯಾರ್ಥಿಗಳ ಆರ್ಥಿಕ ಹಿನ್ನೆಲೆಯನ್ನು ಗಣನೆಗೆ ತೆಗೆದುಕೊಂಡು, ಅವರು ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಿದ್ದಾರೆ ಮತ್ತು ವಿದ್ಯಾರ್ಥಿಗಳಿಗೆ ಪಾಠ ಕಲಿಯಲು ಸಿಮ್ ಕಾರ್ಡ್‌ಗಳನ್ನು ರೀಚಾರ್ಜ್ ಮಾಡಿಸಿದ್ದಾರೆ.

"ನಾವು ವಿದ್ಯಾರ್ಥಿಗಳ ಪೋಷಕರನ್ನು ಭೇಟಿ ಮಾಡಿ, ಮಕ್ಕಳು ಆನ್ ಲೈನ್ ತರಗತಿಗಳಿಗೆ ಹಾಜರಾಗುವಂತೆ ಮಾಡಲು ವಿವಿಧ ಹಳ್ಳಿಗಳಿಗೆ ಹೋಗಿದ್ದೆವು. ಅಲ್ಲಿ ಹಲವಾರು ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ ಬಡತನದಲ್ಲಿ ವಾಸಿಸುತ್ತಿರುವುದನ್ನು ನಾನು ನೋಡಿದೆ. ಇದನ್ನು ನೋಡಿದ ನಂತರ ನನಗೆ ತುಂಬಾ ಬೇಸರವಾಯಿತು" ಎಂದು ಕೆ ಬೈರವಿ ಹೇಳಿದ್ದಾರೆ.

"ಲಾಕ್‌ಡೌನ್ ಕಾರಣದಿಂದಾಗಿ, ನಾನು ಕಳೆದ ಕೆಲವು ವಾರಗಳಿಂದ ನನ್ನ ವಿದ್ಯಾರ್ಥಿಗಳಿಗೆ ವಾಟ್ಸಾಪ್ ಮೂಲಕ ಕಲಿಸುತ್ತಿದ್ದೇನೆ. ಆದರೆ ಅವರಲ್ಲಿ ಕೆಲವರು ಸ್ಮಾರ್ಟ್‌ಫೋನ್ ಹೊಂದಿಲ್ಲ ಮತ್ತು ರೀಚಾರ್ಜ್ ಮಾಡಲು ಹಣವಿಲ್ಲ. ಇದಕ್ಕಾಗಿಯೇ ನಾನು ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ನಿರ್ಧರಿಸಿದೆ ಮತ್ತು ಅವುಗಳನ್ನು ನನ್ನ ವಿದ್ಯಾರ್ಥಿಗಳಿಗೆ ವಿತರಿಸಿದೆ" ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT