ಸಂಜಯ್ ರಾವತ್(ಸಂಗ್ರಹ ಚಿತ್ರ) 
ದೇಶ

ಅಹಮದಾಬಾದನ್ನು ಮಿನಿ ಪಾಕಿಸ್ತಾನಕ್ಕೆ ಹೋಲಿಸಿರುವ ಸಂಜಯ್ ರಾವತ್ ಗುಜರಾತೀಯರ ಕ್ಷಮೆ ಕೇಳಬೇಕು:ಬಿಜೆಪಿ

ಸಂಜಯ್ ರಾವತ್-ಕಂಗನಾ ರಾನಾವತ್ ಆರೋಪ-ಪ್ರತ್ಯಾರೋಪ ರಾಜಕೀಯ ನಾಯಕರ ಮಟ್ಟಿಗೆ ಹೋಗಿದೆ. ಅಹಮದಾಬಾದನ್ನು ಮಿನಿ ಪಾಕಿಸ್ತಾನ ಎಂದು ಕರೆದಿರುವ ಶಿವಸೇನಾ ಸಂಸದ ಸಂಜಯ್ ರಾವತ್ ಗುಜರಾತ್ ರಾಜ್ಯದ ಹೆಸರಿಗೆ ಕಳಂಕ ತರಲು ಹೊರಟಿದ್ದಾರೆ, ಹೀಗಾಗಿ ಗುಜರಾತಿಗರ ಕ್ಷಮೆಯನ್ನು ಅವರು ಕೇಳಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಅಹಮದಾಬಾದ್: ಸಂಜಯ್ ರಾವತ್-ಕಂಗನಾ ರಾನಾವತ್ ಆರೋಪ-ಪ್ರತ್ಯಾರೋಪ ರಾಜಕೀಯ ನಾಯಕರ ಮಟ್ಟಿಗೆ ಹೋಗಿದೆ. ಅಹಮದಾಬಾದನ್ನು ಮಿನಿ ಪಾಕಿಸ್ತಾನ ಎಂದು ಕರೆದಿರುವ ಶಿವಸೇನಾ ಸಂಸದ ಸಂಜಯ್ ರಾವತ್ ಗುಜರಾತ್ ರಾಜ್ಯದ ಹೆಸರಿಗೆ ಕಳಂಕ ತರಲು ಹೊರಟಿದ್ದಾರೆ, ಹೀಗಾಗಿ ಗುಜರಾತಿಗರ ಕ್ಷಮೆಯನ್ನು ಅವರು ಕೇಳಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ನಿನ್ನೆ ಮುಂಬೈಯಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ ಸಂಸದ ಸಂಜಯ್ ರಾವತ್, ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರ ಎಂದು ಹೋಲಿಸುವ ಬಾಲಿವುಡ್  ನಟಿ ಕಂಗನಾ ರಾನಾವತ್ ಅವರಿಗೆ ಅಹಮದಾಬಾದನ್ನು ಮಿನಿ ಪಾಕಿಸ್ತಾನ ಎಂದು ಕರೆಯಲು ಧೈರ್ಯವಿದೆಯೇ ಎಂದು ಕೇಳಿದ್ದರು. ಮುಂಬೈ ನಗರ ಅಸುರಕ್ಷಿತವಾಗಿದೆ ಎಂದು ಕಂಗನಾ ಆರೋಪಿಸಿದ ನಂತರ ಅವರು ಮತ್ತು ಸಂಜಯ್ ರಾವತ್ ಪರಸ್ಪರ ಮಾತಿನ ಕೆಸರೆರಚಾಟದಲ್ಲಿ ತೊಡಗಿದ್ದಾರೆ.

ಸಂಜಯ್ ರಾವತ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಗುಜರಾತ್ ಬಿಜೆಪಿ ವಕ್ತಾರ ಭರತ್ ಪಾಂಡ್ಯ, ಅಹಮದಾಬಾದನ್ನು ಮಿನಿ ಪಾಕಿಸ್ತಾನ ಎಂದು ಕರೆದು ಶಿವಸೇನಾ ನಾಯಕ ಸಂಜಯ್ ರಾವತ್ ರಾಜ್ಯಕ್ಕೆ, ರಾಜ್ಯದ ಜನತೆಗೆ ಅವಮಾನ ಮಾಡಿದ್ದಾರೆ. ಅವರು ಗುಜರಾತೀಯರು ಮತ್ತು ಅಹಮದಾಬಾದೀಯರ ಕ್ಷಮೆ ಕೇಳಬೇಕು ಎಂದಿದ್ದಾರೆ.

ಗುಜರಾತ್ ಗಾಂಧಿ, ಸರ್ದಾರ್ ಪಟೇಲ್ ರಂಥವರು ಹುಟ್ಟಿದ ನಾಡು. ಭಾರತವನ್ನು ಐಕ್ಯತೆ ಮತ್ತು ಏಕತೆಯ ಮೂಲಕ ಗಟ್ಟಿಗೊಳಿಸಿದವರು ಪಟೇಲರು. ಅವರಿಂದಾಗಿಯೇ ಜುನಾಗಡ್ ಮತ್ತು ಹೈದರಾಬಾದ್ ಪಾಕಿಸ್ತಾನ ಪಾಲಾಗುವುದು ತಪ್ಪಿಹೋಗಿ ಭಾರತದಲ್ಲಿಯೇ ಉಳಿದುಕೊಂಡಿತು, ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಬೇಕು ಎಂಬುದು ಅವರ ಕನಸಾಗಿತ್ತು, ಸಂವಿಧಾನ ವಿಧಿ 370ನ್ನು ತೆಗೆದುಹಾಕಿ ಅದನ್ನು ಪ್ರಧಾನಿ ಮೋದಿ ಈಡೇರಿಸಿದ್ದಾರೆ. ಹೀಗಾಗಿ ಭಾರತದ ಸಮಗ್ರತೆ, ಐಕ್ಯತೆಗೆ ಗುಜರಾತ್ ನ ಕಾಣಿಕೆ ಸಾಕಷ್ಟಿದೆ. ಅದನ್ನು ಯಾವತ್ತಿಗೂ ಮರೆಯಬಾರದು ಎಂದು ಭರತ್ ಪಾಂಡ್ಯ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT