ಪಾಂಗೊಂಗು ಸರೋವರ 
ದೇಶ

ಎಲ್ ಎಸಿಯಲ್ಲಿ ಭಾರತ- ಚೀನಾ ಸೇನಾಪಡೆಗಳಿಂದ ಗುಂಡಿನ ಚಕಮಕಿ 

 ಕಳೆದ ಮೂರು ತಿಂಗಳಿನಿಂದಲೂ ಭಾರತ ಹಾಗೂ ಚೀನಾ ನಡುವಣ ವಿವಾದವಾಗುತ್ತಿರುವ  ಪೂರ್ವ ಲಡಾಖ್ ನ ವಾಸ್ತವ ನಿಯಂತ್ರಣ ರೇಖೆಯಲ್ಲಿ ಉಭಯ ದೇಶಗಳ ಸೇನಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿರುವ ಬಗ್ಗೆ ಮಂಗಳವಾರ ಮೂಲಗಳಿಂದ ತಿಳಿದುಬಂದಿದೆ.

ಲಡಾಖ್:  ಕಳೆದ ಮೂರು ತಿಂಗಳಿನಿಂದಲೂ ಭಾರತ ಹಾಗೂ ಚೀನಾ ನಡುವಣ ವಿವಾದವಾಗುತ್ತಿರುವ  ಪೂರ್ವ ಲಡಾಖ್ ನ ವಾಸ್ತವ ನಿಯಂತ್ರಣ ರೇಖೆಯಲ್ಲಿ ಉಭಯ ದೇಶಗಳ ಸೇನಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿರುವ ಬಗ್ಗೆ ಮಂಗಳವಾರ ಮೂಲಗಳಿಂದ ತಿಳಿದುಬಂದಿದೆ.

ಸೋಮವಾರ ಲಡಾಖ್ ನ ಪಾಂಗೊಂಗ್ ಸರೋವರದ ದಕ್ಷಿಣ ದಂಡೆಯಲ್ಲಿರುವ ವಾಸ್ತವ ನಿಯಂತ್ರಣ ರೇಖೆಯನ್ನು ದಾಟಿದ ಭಾರತೀಯ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಚೀನಾ  ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ, ಇಂದು ವಾಸ್ತವ ನಿಯಂತ್ರಣ ರೇಖೆಯಲ್ಲಿ ಚೀನಾ ಸೇನೆಯಿಂದ ಸರಣಿ ಪ್ರಚೋದನಾಕಾರಿ  ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪರಿಸ್ಥಿತಿಯನ್ನು ಸ್ಥಿರಗೊಳಿಸಲು ಪ್ರತಿರೋಧದ ಕ್ರಮಗಳನ್ನು ಕೈಗೊಳ್ಳುವಂತೆ ಚೀನಾ ಗಡಿ ಭದ್ರತಾ ಪಡೆಯನ್ನು ಒತ್ತಾಯಿಸಿದ್ದಾಗಿ ಪೀಪಲ್ ಲೀಬರೇಷನ್ ಆರ್ಮಿ( ಪಿಎಲ್ ಇ) ವಕ್ತಾರರೊಬ್ಬರು ಹೇಳಿದ್ದಾರೆ.

ಆದಾಗ್ಯೂ, ಚೀನಾದ ಪ್ರತಿರೋಧ ಕ್ರಮಗಳ ಬಗ್ಗೆ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ. ಚೀನಾದ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಇಲ್ಲಿಯವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಭಾರತೀಯ ಸೇನೆ ಕಾನೂನುಬಾಹಿರವಾಗಿ ವಾಸ್ತವ ನಿಯಂತ್ರಣ ರೇಖೆಯನ್ನು ದಾಟಿದ್ದು, ಪಾಂಗೊಂಗು ಸರೋವರದಲ್ಲಿ ದಕ್ಷಿಣ ದಂಡ ಹಾಗೂ ಶೆನ್ ಪೊ ಪರ್ವತ ಪ್ರದೇಶಕ್ಕೆ ಪ್ರವೇಶಿಸಿದೆ ಎಂದು ಪಿಎಲ್ ಎ ಅಧಿಕಾರಿಗಳು ಕೂಡಾ ಹೇಳಿದ್ದಾರೆ.

ಕಾರ್ಯಾಚರಣೆ ವೇಳೆಯಲ್ಲಿ ಚೀನಾ ಗಡಿ ಭದ್ರತಾ ಪಡೆಗಳ ಮೇಲೆ ಭಾರತೀಯ ಸೇನೆ ಗುಂಡಿನ ಚಕಮಕಿ ನಡೆಸಿದ್ದು, ಪರಿಸ್ಥಿತಿ ಸ್ಥಿರಗೊಳಿಸಲು ಪ್ರತಿರೋಧದ ಕ್ರಮಗಳನ್ನು  ಕೈಗೊಳ್ಳುವಂತೆ ಒತ್ತಾಯಿಸಿದ್ದಾಗಿ ಅವರು ತಿಳಿಸಿದ್ದಾರೆ.

ಗಂಭೀರ ರೀತಿಯ ಪ್ರಚೋದನಾಕಾರಿ ಕ್ರಮ ಅತ್ಯಂತ ಕೆಟ್ಟ ನಡತೆ ಎಂದು ಹೇಳಿರುವ ಚೀನಾ, ಅಪಾಯಕಾರಿ ಕ್ರಮಗಳನ್ನು ಕೂಡಲೇ  ನಿಲ್ಲಿಸಬೇಕೆಂದು ಭಾರತದ ಬಳಿ ಮನವಿ ಮಾಡಿಕೊಳ್ಳುವುದಾಗಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT