ದೇಶ

ಸಂಸತ್ ಮುಂಗಾರು ಅಧಿವೇಶನ ವರದಿ ಮಾಡಲು 39 ಪತ್ರಕರ್ತರಿಗೆ ಮಾತ್ರ ಅವಕಾಶ 

Srinivas Rao BV

ನವದೆಹಲಿ: ಸಂಸತ್ ಮುಂಗಾರು ಅಧಿವೇಶನದ ವರದಿ ಮಾಡಲು ಈ ಬಾರಿ 39 ಪತ್ರಕರ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ. ಲೋಕಸಭೆ ಹಾಗೂ ರಾಜ್ಯಸಭೆಯ ಕಾರ್ಯದರ್ಶಿಗಳು ಸಂಸತ್ ಭವನದಲ್ಲಿ ಹೆಚ್ಚಿನ ಪತ್ರಕರ್ತರಿಗೆ ಅವಕಾಶ ಇಲ್ಲದಂತೆ ನಿರ್ಬಂಧ ವಿಧಿಸಿದ್ದಾರೆ. 

ದಿನವೊಂದಕ್ಕೆ 24 ಮಾಧ್ಯಮ ಪ್ರತಿನಿಧಿಗಳು ಮಾತ್ರ ಲೋಕಸಭೆ, 15 ಪ್ರತಿನಿಧಿಗಳು ರಾಜ್ಯಸಭೆಗಳ ಕಲಾಪಗಳನ್ನು ವರದಿ ಮಾಡಬಹುದಾಗಿದೆ. 

ಈ 39 ಮಾಧ್ಯಮ ಪ್ರತಿನಿಧಿಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಸಂಸತ್ ಭವನ ಪ್ರವೇಶಿಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲ. ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19 ಪರೀಕ್ಷೆ ನಡೆಸುವುದಕ್ಕೆ ಕಾರ್ಯದರ್ಶಿಗಳು ಇನ್ನೂ ಯಾವುದೇ ನಿರ್ಧಾರವನ್ನೂ ಕೈಗೊಂಡಿಲ್ಲ. 

SCROLL FOR NEXT